Advertisement

Separate country;ಜಿನ್ನಾ ಈ ತಪ್ಪು ಮಾಡಿದ್ದರು:ಸುರೇಶ್ ಹೇಳಿಕೆಗೆ ವಿನಯ್ ಗುರೂಜಿ ಕಿಡಿ

04:32 PM Feb 02, 2024 | Team Udayavani |

ಚಿಕ್ಕಮಗಳೂರು : ದಕ್ಷಿಣ ಭಾರತ ಪ್ರತ್ಯೇಕ ರಾಷ್ಟ್ರ ಅನಿವಾರ್ಯ ಎಂಬ ಹೇಳಿಕೆ ನೀಡಿದ್ದ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ಅವಧೂತ ವಿನಯ್ ಗುರೂಜಿ ಕಿಡಿ ಕಾರಿದ್ದು, ”ಜಿನ್ನಾ ಈ ತಪ್ಪು ಮಾಡಿದ್ದರು, ಗಾಂಧಿ ಅದನ್ನ ಬರೆದಿಡುತ್ತಾರೆ. ನೆಹರೂ-ಜಿನ್ನಾ ಇಬ್ಬರನ್ನೂ ಕೂರಿಸಿ ಗಾಂಧಿ ಮಾತನಾಡುತ್ತಾರೆ.ನಾನಿರುವವರೆಗೂ ನನ್ನನ್ನ ಭಾಗ ಮಾಡಬೇಡಿ ಎಂದು ಕೇಳಿಕೊಂಡಿದ್ದರು ಆದರೆ ಅವತ್ತು ಗಾಂಧಿ ಮಾತನ್ನ ಯಾರೂ ಕೇಳಲಿಲ್ಲ” ಎಂದು ಹೇಳಿದ್ದಾರೆ.

Advertisement

ಚಿಕ್ಕಮಗಳೂರು ಕಾರಗೃಹದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ವಿನಯ್ ಗುರೂಜಿ, ”ಇಂದಿನ ಹಿಂದೂ-ಮಸ್ಲಿಂ ಗಲಾಟೆ, ಹಳ್ಳಿ-ಹಳ್ಳಿಯಲ್ಲೂ ಪ್ರತಿಬಿಂಬಿಸುತ್ತೆ ಎಂದು ಅಂದೇ ಹೇಳಿದ್ದರು. ಇಂದು ದೇಶದಲ್ಲಿ ಆಗುತ್ತಿರುವುದೂ ಅದೇ. ನಮ್ಮ ಅಧಿಕಾರದ ಆಸೆಗೆ ಜಾತಿ-ಧರ್ಮವನ್ನ ಬದಿಗಿಡಬೇಕು. ನಿಮ್ಮ ರಾಜಕೀಯವನ್ನ ಕೆಲಸ-ಟ್ಯಾಲೆಂಟ್ ನಲ್ಲಿ ತೋರಿಸಿ. ಅವರಿವರನ್ನ ಬೈದುಕೊಂಡೇ ವಿಧಾನಸಭೆ ಕಲಾಪ ಮುಗಿಸುತ್ತೀರಿ. ಜನರ ಸಮಯ, ದುಡ್ಡು, ಟ್ಯಾಕ್ಸ್ ನಿಂದ ರಾಜಕಾರಣಿ, ಅಧಿಕಾರಿಗಳ ಸಂಬಳ ನಡೆಯುತ್ತಿದೆ. ಎಲ್ಲರೂ ಈ ಪರಿಜ್ಞಾನ ಇಟ್ಟುಕೊಳ್ಳಬೇಕು, ಆಗ ಇಂತಹ ಭಾಷಣ ಮಾಡುವುದಿಲ್ಲ. ನಾನು-ನೀನು ಅನ್ನೋ ಭೇದ ಹಿಂಸೆ, ನಾನು-ನೀನು ಒಂದು ಅಂದ ದಿನ ಅಹಿಂಸೆ ಎಂದರು.

ಸಮ್ಯಜ್ಞಾನ
ಮುಂದೆ ತಮಿಳುನಾಡು ಮುಖ್ಯಮಂತ್ರಿಯಾಗಿ ಅಣ್ಣಾಮಲೈ ಪ್ರಮಾಣವಚನ ಸ್ವೀಕರಿಸುತ್ತಾರೆ.ಅದನ್ನ ನಾನು ನೋಡುತ್ತೇನೆ, ನೀವೂ ನೋಡುತ್ತೀರಿ. ಇದನ್ನು ನಾನು ಭವಿಷ್ಯ ಅಂತ ಹೇಳುತ್ತಿಲ್ಲ. ಸಮ್ಯಜ್ಞಾನ ಎಂದು ಹೇಳೋಣ. ಮೊನ್ನೆಯಷ್ಟೆ ಅಯೋಧ್ಯೆಯಲ್ಲಿ ರಾಮನ ಪಟ್ಟಾಭಿಷೇಕ ಮುಗಿದಿದೆ. ಸದ್ಯದಲ್ಲೇ ಮೋದಿಯ ಪಟ್ಟಾಭಿಷೇಕವನ್ನೂ ಎಲ್ಲರೂ ನೋಡುತ್ತೇವೆ. ಅಣ್ಣಾಮಲೈ ಎಸ್ ಪಿ ಆಗಿದ್ದಾಗ ಬಂದಿದ್ದರು. 2 ಸೇಬು ಕೊಟ್ಟು, ಖಾಕಿಯಿಂದ ಖಾದಿ ಉಡುತ್ತಾರೆ ಎಂದು ಆಗಲೇ  ಹೇಳಿದ್ದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next