Advertisement

23ರಂದು ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಸಭೆ

06:20 AM Sep 21, 2018 | Team Udayavani |

ಬಾಗಲಕೋಟೆ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಮತ್ತೆ ಭುಗಿಲೆದ್ದಿದೆ. ಸೆ.23ರಂದು ಬಾಗಲಕೋಟೆಯಲ್ಲಿ ಮಹತ್ವದ ಸಭೆ ಆಯೋಜಿಸಿರುವ ಹೋರಾಟ ಸಮಿತಿ, ಪ್ರತ್ಯೇಕ ರಾಜ್ಯಕ್ಕಾಗಿ ಪಂಚ ನಿರ್ಣಯ ಕೈಗೊಳ್ಳಲಿದ್ದು, ಪ್ರಧಾನಿ ಭೇಟಿಗೂ ಚಿಂತನೆ ನಡೆಸಲಿದೆ.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೋರಾಟ ಸಮಿತಿಯ ರಾಜ್ಯ ಕಾರ್ಯದರ್ಶಿ ನಾಗೇಶ ಗೋಲಶೆಟ್ಟಿ, ಸೆ.23ರಂದು ಬೆಳಗ್ಗೆ 11ಕ್ಕೆ ಬಾಗಲಕೋಟೆಯ ಚರಂತಿಮಠ ಸಭಾ ಭವನದಲ್ಲಿ ಹೋರಾಟ ಸಮಿತಿ ಸಭೆ ಆಯೋಜಿಸಲಾಗಿದೆ. ನಿಡಸೋಸಿಯ ಶ್ರೀ ಪಂಚಮಶಿವಲಿಂಗೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಸಾಮಾಜಿಕ ಹೋರಾಟಗಾರ ಭೀಮಪ್ಪ ಗಡಾದ ಅಧ್ಯಕ್ಷತೆ ವಹಿಸುವರು. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟಕ್ಕೆ ರೂಪುರೇಷೆ ತಯಾರಿಸಲಾಗುವುದು. ಪ್ರತ್ಯೇಕ ರಾಜ್ಯದ ಗಡಿ, ಜಿಲ್ಲೆ, ಧ್ವಜ, ರಾಜಧಾನಿ ಸೇರಿದಂತೆ ಸಭೆಯಲ್ಲಿ ಪಂಚ (ಐದು) ನಿರ್ಣಯಕೈಗೊಳ್ಳಲಾಗುವುದು. ಪ್ರಧಾನಿ ಮೋದಿ ಭೇಟಿ ಮಾಡಿ ಮನವಿ ಸಲ್ಲಿಸಲೂ ಚರ್ಚಿಸಲಾವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next