Advertisement

road mishap ಉಳ್ಳಾಲದಲ್ಲಿ ಸರಣಿ ಅಪಘಾತ: ಇಬ್ಬರಿಗೆ ಗಾಯ

11:49 PM Oct 10, 2023 | Team Udayavani |

ಉಳ್ಳಾಲ: ಕೋಟೆಕಾರು ಬೀರಿ ಜಂಕ್ಷನ್‌ನಲ್ಲಿ ಕರ್ನಾಟಕ ಸಾರಿಗೆ ಬಸ್‌ ಹಾಗೂ ಸ್ಕೂಟರ್‌ ನಡುವೆ ಮಂಗಳವಾರ ಸಂಜೆ ಸಂಭವಿಸಿದ ಸರಣಿ ಅಪಘಾತದಲ್ಲಿ ಅಡ್ಕ ನಿವಾಸಿ ಕೃಷ್ಣ ಶೆಟ್ಟಿ ತಾಮಾರ್‌(65) ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

Advertisement

ಕೋಟೆಕಾರು ಗ್ರಾ. ಪಂ. ಮಾಜಿ ಅಧ್ಯಕ್ಷರಾಗಿರುವ ಕೃಷ್ಣ ಶೆಟ್ಟಿ ತಾಮಾರು ಮನೆಯಿಂದ ಸ್ಕೂಟರ್‌ನಲ್ಲಿ ಬೀರಿ ಕಡೆ ಸಂಚರಿಸುವಾಗ ಈ ಘಟನೆ ನಡೆದಿದೆ. ಮತ್ತೋರ್ವ ಸವಾರನಿಗೆ ಅಲ್ಪ ಗಾಯವಾಗಿದೆ.

ಮಂಗಳೂರು ದಕ್ಷಿಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖ ಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next