Advertisement

Parliament session; ಗಣೇಶ ಚತುರ್ಥಿಯಿಂದ ಹೊಸ ಸಂಸತ್ ಭವನದಲ್ಲಿ ಅಧಿವೇಶನ: ಪ್ರಧಾನಿ ಮೋದಿ

11:44 AM Sep 18, 2023 | Team Udayavani |

ಹೊಸದಿಲ್ಲಿ: “ಇದೊಂದು ಚಿಕ್ಕ ಅಧಿವೇಶನ. ಸಂಸದರು ಉತ್ಸಾಹದ ವಾತಾವರಣದಲ್ಲಿ ಅಧಿವೇಶನಕ್ಕೆ ಗರಿಷ್ಠ ಸಮಯವನ್ನು ಮೀಸಲಿಡಬೇಕು. ದುಃಖ ಪಡಲು, ಕಿರುಚಾಡಲು ತುಂಬಾ ಸಮಯ ಸಿಗುತ್ತದೆ ಆಗ ಅದನ್ನು ಮಾಡುತ್ತಿರಿ. ಆದರೆ ಇವು ಜೀವನದಲ್ಲಿ ನಿಮ್ಮಲ್ಲಿ ಉತ್ಸಾಹ ಮತ್ತು ನಂಬಿಕೆಯನ್ನು ತುಂಬುವ ಕ್ಷಣಗಳು” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

Advertisement

ಸಂಸತ್ತಿನ ವಿಶೇಷ ಅಧಿವೇಶನ ಪ್ರಾರಂಭವಾಗುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, “ಚಂದ್ರಯಾನ-3 ನಮ್ಮ ತಿರಂಗವನ್ನು ಎತ್ತಿ ಹಿಡಿದಿದೆ, ಶಿವಶಕ್ತಿ ಪಾಯಿಂಟ್ ಹೊಸ ಸ್ಫೂರ್ತಿಯ ಕೇಂದ್ರವಾಗಿದೆ, ತಿರಂಗಾ ಪಾಯಿಂಟ್ ನಮ್ಮಲ್ಲಿ ಹೆಮ್ಮೆಯನ್ನು ತುಂಬುತ್ತಿದೆ. ಜಗತ್ತು, ಅಂತಹ ಸಾಧನೆಯನ್ನು ಮಾಡಿದಾಗ, ಅದನ್ನು ಆಧುನಿಕತೆ, ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಜೋಡಿಸುವ ಮೂಲಕ ನೋಡಲಾಗುತ್ತದೆ. ಈ ಸಾಮರ್ಥ್ಯವು ಪ್ರಪಂಚದ ಮುಂದೆ ಬಂದಾಗ, ಹಲವಾರು ಅವಕಾಶಗಳು ಮತ್ತು ಸಾಧ್ಯತೆಗಳು ಭಾರತದ ಬಾಗಿಲುಗಳನ್ನು ತಟ್ಟುತ್ತವೆ. ಜಿ20 ಶೃಂಗಸಭೆಯಲ್ಲಿ ನಾವು ಜಾಗತಿಕ ಧ್ವನಿಯಾಗಿದ್ದೇವೆ. ಆಫ್ರಿಕನ್ ಯೂನಿಯನ್ ಜಿ20 ನ ಖಾಯಂ ಸದಸ್ಯತ್ವ ಪಡೆದಿದೆ ಎಂದು ಭಾರತವು ಯಾವಾಗಲೂ ಹೆಮ್ಮೆಪಡುತ್ತದೆ. ಇದೆಲ್ಲವೂ ಭಾರತದ ಉಜ್ವಲ ಭವಿಷ್ಯದ ಸಂಕೇತವಾಗಿದೆ ಎಂದರು.

ನಾಳೆ ಗಣೇಶ ಚತುರ್ಥಿಯಂದು ಹೊಸ ಸಂಸತ್ತಿಗೆ ತೆರಳಲಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಇದೇ ಸಂದರ್ಭದಲ್ಲಿ ಹೇಳಿದ್ದಾರೆ. “ಗಣಪತಿಯನ್ನು ವಿಘ್ನಹರ್ತ ಎಂದೂ ಕರೆಯಲಾಗುತ್ತದೆ, ಈಗ ದೇಶದ ಅಭಿವೃದ್ಧಿಯಲ್ಲಿ ಯಾವುದೇ ಅಡೆತಡೆಗಳಿಲ್ಲ… ‘ನಿರ್ವಿಘ್ನ ರೂಪ್ ಸೇ ಸಾರೇ ಸಪ್ನೆ ಸಾರೆ ಸಂಕಲ್ಪ ಭಾರತ ಪರಿಪೂರ್ಣ ಕರೇಗಾ’… ಸಂಸತ್ತಿನ ಈ ಅಧಿವೇಶನವು ಚಿಕ್ಕದಾಗಿರಬಹುದು, ಆದರೆ ಇದು ವ್ಯಾಪ್ತಿಯಲ್ಲಿ ಐತಿಹಾಸಿಕವಾಗಿದೆ” ಎಂದು ಹೇಳಿದರು.

“ಸಂಸತ್ತಿನ ಈ ಅಧಿವೇಶನವು ಚಿಕ್ಕದಾಗಿದೆ, ಆದರೆ ಈ ಸಮಯಕ್ಕೆ ಇದು ದೊಡ್ಡದಾಗಿದೆ. ಇದು ಐತಿಹಾಸಿಕ ನಿರ್ಧಾರಗಳ ಅಧಿವೇಶನವಾಗಿದೆ. ಈ ಅಧಿವೇಶನದ ವಿಶೇಷತೆ ಏನೆಂದರೆ 75 ವರ್ಷಗಳ ಪಯಣ ಹೊಸ ತಾಣದಿಂದ ಆರಂಭವಾಗುತ್ತಿದೆ. ಈಗ ಹೊಸ ಜಾಗದಿಂದ ಪಯಣ ಮುಂದಕ್ಕೆ ಸಾಗುತ್ತಿರುವಾಗ 2047ರ ವೇಳೆಗೆ ದೇಶವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಬೇಕೆಂಬ ಸಂಕಲ್ಪವಿರಲಿ. ಇದಕ್ಕಾಗಿ ಮುಂಬರುವ ಎಲ್ಲಾ ನಿರ್ಧಾರಗಳನ್ನು ನೂತನ ಸಂಸತ್ ಭವನದಲ್ಲಿ ಕೈಗೊಳ್ಳಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next