Advertisement

ಬೀದರನಲ್ಲಿ ಕೃಷಿ ಆಧಾರಿತ ಕೈಗಾರಿಕೆ ಸ್ಥಾಪಿಸಿ

06:18 PM Sep 04, 2021 | Team Udayavani |

ಬೀದರ: ಕೃಷಿ ಪ್ರಧಾನ ಜಿಲ್ಲೆಯಾಗಿರುವ ಬೀದರನಲ್ಲಿ ಕೇಂದ್ರ ಸರ್ಕಾರದಿಂದ ಕೃಷಿ ಆಧಾರಿತ ಬೃಹತ್‌ ಕೈಗಾರಿಕೆ ಸ್ಥಾಪಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್‌ ಅವರು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರಲ್ಲಿ ಬೇಡಿಕೆ ಸಲ್ಲಿಸಿದರು.

Advertisement

ತಾಲೂಕಿನ ಆಣದೂರ ಗ್ರಾಮದ ಶುಕ್ರವಾರ ಕನಿಷ್ಠ ಬೆಂಬಲ ಬೆಲೆ ಕೇಂದ್ರಕ್ಕೆ ಭೇಟಿ ನೀಡಿದ ವೇಳೆ ಸಚಿವರು ಮನವಿ ಪತ್ರ ನೀಡಿದರು.ಬೀದರನಲ್ಲಿ ಯಾವುದೇ ರೀತಿಯ ಬೃಹತ್‌ ಕೈಗಾರಿಕೆಗಳು ಇಲ್ಲದಿರುವುದರಿಂದ ಇಲ್ಲಿನ ಯುವ ಜನತೆ ಉದ್ಯೋಗಕ್ಕಾಗಿ ಮಹಾನಗರಗಳಿಗೆ ಅಲೆದಾಡಬೇಕಾದ ಅನಿವಾರ್ಯತೆ ಇದೆ. ಆದ್ದರಿಂದ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದಿಂದ ಕೃಷಿ ಆಧಾರಿತ ಬೃಹತ್‌ ಕೈಗಾರಿಕೆ ಸ್ಥಾಪಿಸಬೇಕಿದೆ ಎಂದು ಮನವಿ ಸಲ್ಲಿಸಿದರು.

ಬೀದರನಲ್ಲಿ ಜೋಳ, ಉದ್ದು, ಹೆಸರು, ಸೋಯಾದಂತಹ ಹಲವು ಪ್ರಮುಖ ಬೆಳೆಗಳನ್ನು ಬೆಳೆಯಲಾಗುತ್ತದೆ. ಈ ಭಾಗದಲ್ಲಿ ಕೃಷಿ ಕ್ಷೇತ್ರವನ್ನು ಇನ್ನಷ್ಟು ಅಭಿವೃದ್ಧಿಪಡಿಸಲು ಹಾಗೂ ರೈತರ ಆದಾಯವನ್ನು ದ್ವಿಗುಣಗೊಳಿಸಲು ಕೇಂದ್ರ ಕೃಷಿ ಇಲಾಖೆಯ ನೆರವಿನ ಅಗತ್ಯವಿದೆ ಎಂದರು.

ರೈತರು ಕೃಷಿಯಲ್ಲಿ ಆಧುನಿಕತೆ ಅಳವಡಿಸಿಕೊಳ್ಳಲು ನೆರವಾಗುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದಿಂದ ಸಂಶೋಧನಾ ಕೇಂದ್ರ ಮತ್ತು ರೈತರಿಗಾಗಿ ತರಬೇತಿ ಕೇಂದ್ರವನ್ನು ಸ್ಥಾಪಿಸಬೇಕು. ಜಿಲ್ಲೆಯಲ್ಲಿ ರೈತರು ಈಗಾಗಲೇ ಸಾವಯವ ಕೃಷಿಯಲ್ಲಿ ತೊಡಗಿಸಿಕೊಳ್ಳುತ್ತಿದ್ದು, ಇದಕ್ಕೆ ಇನ್ನೂ ಹೆಚ್ಚಿನ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಹೊಸ ಯೋಜನೆ ರೂಪಿಸಬೇಕು ಎಂದು ವಿನಂತಿಸಿದರು. ಜಿಲ್ಲೆಯಲ್ಲಿ ಬೃಹತ್‌ ನೀರಾವರಿ ಯೋಜನೆಗಳು ಇಲ್ಲದೇ ಇರುವುದರಿಂದ ರೈತರು ವಾಣಿಜ್ಯ ಬೆಳೆಗಳನ್ನು ಬೆಳಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಕೇಂದ್ರದಿಂದ ಜಿಲ್ಲೆಯಲ್ಲಿ ಬೃಹತ್‌ ನೀರಾವರಿ ಯೋಜನೆ ಜಾರಿಗೊಳಿಸಲು ಕ್ರಮ ವಹಿಸಬೇಕು ಎಂದು ಮನವಿ ಮಾಡಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next