Advertisement

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

01:59 PM Apr 18, 2024 | Team Udayavani |

ಅಮೇಥಿ: ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವೆ ಸ್ಮೃತಿ ಜುಬಿನ್ ಇರಾನಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ನಾಯಕ, ಉತ್ತರಪ್ರದೇಶದ ರಾಜ್ಯ ಸಹ ಸಂಯೋಜಕ ವಿಕಾಸ್ ಅಗ್ರಹಾರಿ ಗುರುವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

Advertisement

ಬಿಜೆಪಿ ಜಿಲ್ಲಾಧ್ಯಕ್ಷ ರಾಮ್ ಪ್ರಸಾದ್ ಮಿಶ್ರಾ ಅವರು ವಿಕಾಸ್ ಅಗ್ರಹಾರಿ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡರು. ಜಗದೀಶ್‌ಪುರ ವಿಧಾನಸಭಾ ಕ್ಷೇತ್ರದ ಪ್ರಮುಖ ನಾಯಕ ವಿಕಾಸ್‌ ಅಗ್ರಹಾರಿ ಅವರನ್ನು ಅಖಿಲ ಭಾರತ ಕಾಂಗ್ರೆಸ್‌ ಸಮಿತಿ ರಾಜ್ಯ ಸಮನ್ವಯಾಧಿಕಾರಿಯನ್ನಾಗಿ ಮಾಡಿದ್ದರೂ ಬಿಜೆಪಿಯ ಸಿದ್ದಾಂತದಲ್ಲಿ ನಂಬಿಕೆ ಇಟ್ಟು ಪಕ್ಷದ ಸದಸ್ಯತ್ವ ಪಡೆದಿದ್ದಾರೆ ಎಂದು ಬಿಜೆಪಿ ವಕ್ತಾರ ಚಂದ್ರಮೌಳಿ ಸಿಂಗ್‌ ಹೇಳಿದ್ದಾರೆ.

ಅಮೇಥಿ ಲೋಕಸಭಾ ಕ್ಷೇತ್ರದಿಂದ ಸ್ಮೃತಿ ಇರಾನಿ ಅವರು ಮತ್ತೊಮ್ಮೆ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಕಾಂಗ್ರೆಸ್ ಇನ್ನೂ ತನ್ನ ಅಭ್ಯರ್ಥಿಯನ್ನು ಘೋಷಿಸಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next