Advertisement

ಅಡಿಕೆಗೆ ಹಿನ್ನಡೆ ತಾತ್ಕಾಲಿಕ; ಆತಂಕ ಬೇಡ: ಕ್ಯಾಂಪ್ಕೊ

01:41 AM Jun 09, 2022 | Team Udayavani |

ಮಂಗಳೂರು: ಪ್ರತೀ ವರ್ಷ ವಿದೇಶದಿಂದ ಅಡಿಕೆ ಆಮದಾಗುತ್ತಿದ್ದು, ಈ ಬಾರಿಯೂ ಅಷ್ಟೇ ಪ್ರಮಾಣದ ಅಡಿಕೆ ಆಮದಾಗಿದೆ, ಹಾಗಾಗಿ ರೈತರು ಆತಂಕ ಪಡಬೇಕಾಗಿಲ್ಲ ಎಂದು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದ್ದಾರೆ.

Advertisement

ಅಡಿಕೆ ಆಮದು ತಡೆಗೆ ಕ್ಯಾಂಪ್ಕೋ ಸರ್ವ ರೀತಿಯಲ್ಲೂ ಪ್ರಯತ್ನಿಸುತ್ತಿದ್ದು ಕೇಂದ್ರ ಸರಕಾರದ ಸಚಿವರು ಮತ್ತು ಇಲಾಖಾ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ. ಉತ್ತರ ಭಾರತದಲ್ಲಿ ತಾಪಮಾನ ಏರಿಕೆ ಯಾಗಿರುವುದರಿಂದ ತಾತ್ಕಾಲಿಕವಾಗಿ ಕರಾವಳಿ ಭಾಗದ ಅಡಿಕೆಯ ಬೇಡಿಕೆಗೆ ತಾತ್ಕಾಲಿಕ ಹಿನ್ನಡೆಯಾಗಿದೆ. ಮುಂದಿನ ಕೆಲವು ದಿನಗಳಲ್ಲಿ ಸಮಸ್ಯೆ ಪರಿಹಾರಗೊಳ್ಳುವ ನಿರೀಕ್ಷೆಯಿದೆ.

ಮಾರುಕಟ್ಟೆ ಸಮೀಕ್ಷೆ ಪ್ರಕಾರ, ಉತ್ತರ ಭಾರತದ ಅಡಿಕೆ ಮಾರುಕಟ್ಟೆಯಲ್ಲಿ ಅಡಿಕೆ ದಾಸ್ತಾನಿನಲ್ಲಿ ಕೊರತೆ ಇದೆ. ಮುಂದಿನ ದಿನಗಳಲ್ಲಿ ಮುಂಗಾರು ಪ್ರಾರಂಭ ವಾಗಿ ಉತ್ತರ ಭಾರತದಲ್ಲಿ ಉಷ್ಣತೆ ಕಡಿಮೆಯಾಗಲಿದ್ದು, ಅಡಿಕೆಗೆ ಉತ್ತಮ ಬೇಡಿಕೆ ಬರುವ ಎಲ್ಲ ಅವಕಾಶಗಳಿರುವುದರಿಂದ ಬೇಡಿಕೆಯಲ್ಲಿ ಚೇತರಿಕೆ ಕಾಣಲಿದೆ. ರೈತರು ಯಾವುದೇ ಅಪಪ್ರಚಾರಕ್ಕೆ ಕಿವಿಗೊಡದೆ, ದೈನಂದಿನ ಖರ್ಚಿಗೆ ಅಗತ್ಯವಿರುವಷ್ಟೇ ಅಡಿಕೆ ಮಾರಾಟ ಮಾಡುವಂತೆ ಕ್ಯಾಂಪ್ಕೋ
ಅಧ್ಯಕ್ಷರು ಸಲಹೆ ನೀಡಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next