Advertisement

ತಿರುಪತ್ತೂರ್ : ದೇವಸ್ಥಾನಕ್ಕೆ ತೆರಳುತ್ತಿದ್ದ ಟ್ರಕ್ ಉರುಳಿ ಏಳು ಮಂದಿ ಸಾವು

04:40 PM Apr 02, 2022 | Team Udayavani |

ತಿರುಪತ್ತೂರ್ : ತಮಿಳುನಾಡಿನ ಸೆಂಬರೈ ಗ್ರಾಮದಲ್ಲಿ ದೇವಸ್ಥಾನಕ್ಕೆ ತೆರಳುತ್ತಿದ್ದ ಟ್ರಕ್ ಕಣಿವೆಗೆ ಬಿದ್ದಿದ್ದು, ಮಹಿಳೆಯರು ಸೇರಿದಂತೆ 7  ಮಂದಿ ಮೃತಪಟ್ಟಿದ್ದು, 14 ಮಂದಿ ಗಾಯಗೊಂಡಿರುವ ಭೀಕರ ಅವಘಡ ಶನಿವಾರ ನಡೆದಿದೆ.

Advertisement

ದೇವಾಲಯವು ಸೆಂಬರೈ ಗ್ರಾಮದ ಬೆಟ್ಟದ ಮೇಲಿದ್ದು, ಟ್ರಕ್‌ನ ಚಾಲಕ, ಘಾಟ್ ರಸ್ತೆಯಲ್ಲಿ ಮಾತುಕತೆ ನಡೆಸುತ್ತಿದ್ದಾಗ ವಾಹನದ ನಿಯಂತ್ರಣ ತಪ್ಪಿ ಅಪಘಾತಕ್ಕೆ ಕಾರಣವಾಯಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

“ಅಪಘಾತದಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು 14 ಮಂದಿ ಗಾಯಗೊಂಡಿದ್ದಾರೆ ಎಂದು ನಮಗೆ ಮಾಹಿತಿ ಬಂದಿದೆ. ಹೆಚ್ಚಿನ ತನಿಖೆಗಾಗಿ ಅಧಿಕಾರಿಗಳು ಸ್ಥಳಕ್ಕೆ ತೆರಳಿದ್ದಾರೆ” ಎಂದು ಅಧಿಕಾರಿ ತಿಳಿಸಿದ್ದಾರೆ.

ಘಟನೆಯ ವಿಡಿಯೋದಲ್ಲಿ ನೀರಿನ ಬಾಟಲಿಗಳು ಮತ್ತು ಚಪ್ಪಲಿಗಳು ಸ್ಥಳದ ಸುತ್ತಲೂ ಹರಡಿಕೊಂಡಿದ್ದು, ಗಾಯಗೊಂಡ ಮಹಿಳೆಯರು ಮತ್ತು ಮಕ್ಕಳು ಪಲ್ಟಿಯಾದ ಟ್ರಕ್‌ನಿಂದ ದೂರದಲ್ಲಿ ನೆಲದ ಮೇಲೆ ಬಿದ್ದಿರುವುದು ಕಂಡುಬಂದಿದೆ.

ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next