Advertisement

ಸಚಿವ ರಮಾನಾಥ್‌ ರೈಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು 

02:24 PM Mar 16, 2017 | Team Udayavani |

ಬೆಂಗಳೂರು: ಅರಣ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮನಾಥ್‌ ರೈ ಅವರು ಅನಾರೋಗ್ಯದಿಂದ ಎಂ.ಎಸ್‌.ರಾಮಯ್ಯ ಅಸ್ಪತ್ರೆಗೆ ಗುರುವಾರ ದಾಖಲಾಗಿರುವ ಬಗ್ಗೆ ವರದಿಯಾಗಿದೆ.

Advertisement

ರಕ್ತದೊತ್ತಡ ಮತ್ತು ಎದೆನೋವಿನಿಂದ ಬಳಲುತ್ತಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಯಾವುದೇ ಹೆಚ್ಚಿನ ಸಮಸ್ಯೆಯಿಲ್ಲ. ಬೇಗನೆ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಅವರ ಸಂಬಂಧಿಗಳು ತಿಳಿಸಿರುವುದಾಗಿ ವರದಿಯಾಗಿದೆ. 

ಪರೀಕ್ಷೆಗಳನ್ನು ನಡೆಸುವ ಸಲುವಾಗಿ ದಾಖಲು ಮಾಡಲಾಗಿದೆ ಹೊರತು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಸಹೋದರ ದಶರಥ ರೈ ಹೇಳಿಕೆ ನೀಡಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next