ಮುಕ್ತಾಯಗೊಳ್ಳಲಿದ್ದು, ಆ ಸ್ಥಾನಗಳಿಗೆ ಜೂ.11ಕ್ಕೆ ಮತದಾನ ನಡೆಯಲಿದೆ.
Advertisement
ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಸೋಮಣ್ಣ ಬೇವಿನಮರದ ಹಾಗೂ ಬೈರತಿ ಸುರೇಶ್ ಅವರು ಈಗಾಗಲೇ ರಾಜೀನಾಮೆ ನೀಡಿದ್ದಾರೆ. ತೆರವಾಗುವ 11 ಸ್ಥಾನಗಳ ಪೈಕಿ ಈಗಿನ ಸಂಖ್ಯಾಬಲದ ಪ್ರಕಾರ ಜೆಡಿಎಸ್ಗೆ 2, ಬಿಜೆಪಿಗೆ 5 ಹಾಗೂ ಕಾಂಗ್ರೆಸ್ ಗೆ ನಾಲ್ಕು ಸ್ಥಾನಗಳು ಲಭ್ಯವಾಗಲಿವೆ. ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ವಂಚಿತರಿಗೆ ಮೂರೂ ಪಕ್ಷಗಳು ವಿಧಾನಪರಿಷತ್ ಸದಸ್ಯತ್ವ ನೀಡುವುದಾಗಿ ಹೇಳಿ ಸಮಾಧಾನಪಡಿಸಿದ್ದು, ಇದೀಗ ಆ ಸ್ಥಾನಗಳಿಗೆ ಲಾಬಿ ಪ್ರಾರಂಭವಾಗಲಿದೆ. ಬಿಜೆಪಿ ಯಲ್ಲಿ ಬಿ.ಜೆ.ಪುಟ್ಟಸ್ವಾಮಿ, ಡಿ.ಎಸ್.ವೀರಯ್ಯ, ರಘು ನಾಥ್ರಾವ್ ಮಲ್ಕಾಪುರೆ ಮತ್ತೂಂದು ಅವಕಾಶಕ್ಕೆ ಬೇಡಿಕೆ ಇಟ್ಟಿದ್ದಾರೆ.
ನಿವೃತ್ತಿಯಾಗಲಿದ್ದಾರೆ. ಆ ಪೈಕಿ, ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡಿದ್ದ ಎಂ.ಡಿ.ಲಕ್ಷ್ಮಿ ನಾರಾಯಣ ಈಗಾಗಲೇ ರಾಜೀನಾಮೆ ನೀಡಿದ್ದಾರೆ.
Related Articles
ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್ತಿನ 11 ಸ್ಥಾನಗಳಿಗೆ ನಡೆಯಲಿರುವ ದ್ವೆ„ವಾರ್ಷಿಕ ಚುನಾವಣೆಗೆ ಮೇ 24 ರಂದು
ಅಧಿಸೂಚನೆ ಪ್ರಕಟಗೊಳ್ಳಲಿದೆ. ನಾಮಪತ್ರ ಸಲ್ಲಿಸಲು ಮೇ 31 ಕೊನೇ ದಿನಾಂಕವಾಗಿದ್ದು, ಜೂ.1ಕ್ಕೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸ್ ಪಡೆಯಲು ಜೂ. 4 ಕೊನೇ ದಿನ. ಜೂ.11ಕ್ಕೆ ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು, ಅದೇ ದಿನ ಸಂಜೆ 5 ಗಂಟೆಯಿಂದ ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ. ಪರಿಷತ್ನಲ್ಲಿ ಸಂಖ್ಯಾ ಬಲ ಏರು-ಪೇರು
ರಾಜ್ಯ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಬಸನಗೌಡ ಪಾಟೀಲ್ ಯತ್ನಾಳ್, ವಿ.ಸೋಮಣ್ಣ, ಕೆ.ಎಸ್. ಈಶ್ವರಪ್ಪ, ಡಾ.ಜಿ. ಪರಮೇಶ್ವರ್ ಶಾಸಕರಾಗಿ ಆಯ್ಕೆಯಾಗಿರು ವುದರಿಂದ ಆ ನಾಲ್ಕು ಸ್ಥಾನಗಳು ತೆರವಾಗಲಿವೆ. ಅದಕ್ಕೂ ಚುನಾವಣೆ ನಡೆಯಬೇಕಿದೆ. ಬಸನಗೌಡ ಪಾಟೀಲ್ ಅವರು ಸ್ಥಳೀಯ ಸಂಸ್ಥೆಗಳಿಂದ ಹಾಗೂ ಉಳಿದ ಮೂವರು ವಿಧಾನಸಭೆಯಿಂದ ನೇಮಕಗೊಂಡವರಾಗಿದ್ದಾರೆ. ಒಟ್ಟಾರೆ 75 ಸಂಖ್ಯಾಬಲದ
ವಿಧಾನಪರಿಷತ್ನಲ್ಲಿ 23 ಸ್ಥಾನಗಳು ಖಾಲಿಯಾಗಿ, ಭರ್ತಿಯಾಗಲಿವೆ. ಇದರಿಂದಾಗಿ ಮೂರೂ ಪಕ್ಷಗಳ ಬಲಾಬಲದಲ್ಲೂ ಏರು-ಪೇರಾಗಲಿದೆ.
Advertisement