Advertisement

Puttur: ಲೈಂಗಿಕ ದೌರ್ಜನ್ಯ ಪ್ರಕರಣ: ಅರುಣ್‌ ಪುತ್ತಿಲಗೆ ಜಾಮೀನು

09:52 PM Sep 02, 2024 | Team Udayavani |

ಪುತ್ತೂರು: ಲೈಂಗಿಕ ದೌರ್ಜನ್ಯ, ಬೆದರಿಕೆ ಕುರಿತಾಗಿ ಮಹಿಳೆಯೋರ್ವರು ತನ್ನ ವಿರುದ್ಧ ಪುತ್ತೂರು ಮಹಿಳಾ ಠಾಣೆಯಲ್ಲಿ ನೀಡಿದ ದೂರಿಗೆ ಸಂಬಂಧಿಸಿ ಬಿಜೆಪಿ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಅವರಿಗೆ ಪುತ್ತೂರಿನ ಪ್ರಿನ್ಸಿಪಲ್‌ ಸಿವಿಲ್‌ ಜಡ್ಜ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯ ಸೋಮವಾರ ನಿರೀಕ್ಷಣ ಜಾಮೀನು ಮಂಜೂರು ಮಾಡಿದೆ.

Advertisement

ಬೆಂಗಳೂರಿನ ಹೊಟೇಲ್‌ ಒಂದಕ್ಕೆ ಮಹಿಳೆಯೊಬ್ಬರನ್ನು ಕರೆಸಿಕೊಂಡು ಇಚ್ಚೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಲ್ಲದೆ ನಂಬಿಕೆ ದ್ರೋಹ, ಮಾನಹಾನಿ, ಬ್ಲ್ಯಾಕ್‌ವೆುàಲ್‌, ಶಾರೀರಿಕ ಮತ್ತು ಮಾನಸಿಕ ಪೀಡನೆ, ಕೊಲೆ ಬೆದರಿಕೆಯನ್ನು ಹಾಕುತ್ತಿರುವ ಬಗ್ಗೆ ಮಹಿಳಾ ಠಾಣೆಯಲ್ಲಿ ಅರುಣ್‌ ಪುತ್ತಿಲ ವಿರುದ್ಧ ರವಿವಾರ ಪ್ರಕರಣ ದಾಖಲಾಗಿತ್ತು. ವಕೀಲ ನರಸಿಂಹ ಪ್ರಸಾದ್‌ ಮೂಲಕ ಅರುಣ್‌ ಕುಮಾರ್‌ ಪುತ್ತಿಲ ಅವರು ನ್ಯಾಯಾಲಯಕ್ಕೆ ಹಾಜರಾಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಅವರಿಗೆ ಜಾಮೀನು ಮಂಜೂರು ಮಾಡಿದೆ.

ನ್ಯಾಯಾಂಗದಲ್ಲಿ ನಂಬಿಕೆ: ಪುತ್ತಿಲ
ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಇದ್ದು, ಮುಂದಿನ ದಿನಗಳಲ್ಲಿ ನನ್ನ ವಿರುದ್ಧ ಬಂದಂತಹ ಆರೋಪಗಳಿಗೆ ಕಾನೂನು ರೀತಿಯ ಹೋರಾಟ ಮಾಡುತ್ತೇನೆ ಎಂದು ಅರುಣ್‌ ಕುಮಾರ್‌ ಪುತ್ತಿಲ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next