Advertisement

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಮೂವರ ಸೆರೆ

11:38 PM Feb 02, 2020 | Lakshmi GovindaRaj |

ರಾಯಚೂರು: ನಗರದ ಬಾಲಕಿಯರ ಬಾಲಮಂದಿರದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿ ಸಿ ಮೂವರು ಆರೋಪಿಗಳನ್ನು ಮಹಿಳಾ ಠಾಣೆ ಪೊಲೀಸರು ಬಂಧಿ ಸಿದ್ದಾರೆ. ಬಾಲಮಂದಿರದಲ್ಲಿ ಕ್ಲರ್ಕ್‌ ಕೆಲಸ ಮಾಡುತ್ತಿದ್ದ ಸಿದ್ದಯ್ಯ ಎಂಬಾತ ಲೈಂಗಿಕ ದೌರ್ಜನ್ಯವೆಸಗಿದ್ದ. ಈತನಿಗೆ ಸೂಪರಿಟೆಂಡೆಂಟ್‌ ಸೈಯ್ಯದ್‌ ಪಾಷಾ ಮತ್ತು ಅಡುಗೆ ಸಹಾಯಕಿ ಕಮಲಮ್ಮ ಸಹಕರಿಸಿದ ಕಾರಣ ಮೂವರನ್ನು ವಶಕ್ಕೆ ಪಡೆಯಲಾಗಿದೆ.

Advertisement

2019ರ ನ.11ರಂದು ಬಾಲಮಂದಿರದಲ್ಲಿದ್ದ ಬಾಲಕಿಯನ್ನು ಆರೋಪಿ ಸಿದ್ದಯ್ಯ ಮನೆಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯವೆಸಗಿದ್ದ ಎನ್ನಲಾಗಿದೆ. ಈ ಕುರಿತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅ ಧಿಕಾರಿ ನೀಡಿದ ದೂರಿನನ್ವಯ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದ.

ವಿಶೇಷ ತಂಡ ರಚಿಸಿ ತನಿಖೆ ಕೈಗೊಂಡ ಪೊಲೀಸರು, ಆರೋಪಿಯನ್ನು ಸೆರೆ ಹಿಡಿದಿದ್ದರು. ವಿಚಾರಣೆ ನಡೆಸಿದಾಗ ಲೈಂಗಿಕ ದೌರ್ಜನ್ಯ ಎಸಗಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಜತೆಗೆ ಹಾಸ್ಟೆಲ್‌ ಸೂಪರಿಂಟೆಂಡೆಂಟ್‌ ಹಾಗೂ ಅಡುಗೆ ಸಹಾಯಕಿ ಕೂಡ ನೆರವು ನೀಡಿದ್ದಾಗಿ ತಿಳಿಸಿದ್ದಾನೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next