Advertisement

SEZ ಸಮಸ್ಯೆ: ಕೇಂದ್ರ ಸಚಿವರ ಜತೆ ಕ್ಯಾ| ಚೌಟ ಮಹತ್ವದ ಸಭೆ

11:14 PM Aug 07, 2024 | |

ಮಂಗಳೂರು: ಮಂಗಳೂರು ಆರ್ಥಿಕ ವಲಯ(ಎಸ್‌ಇಝಡ್‌) ದಲ್ಲಿ ಜೆಬಿಎಫ್‌ ಪೆಟ್ರೋಕೆಮಿಕಲ್ಸ್‌ ಮತ್ತು ಗೇಲ್‌ನ ವಿಲೀನದಿಂದ ಎಸ್‌ಇಝಡ್‌ಗಾಗಿ ಜಾಗ ಕಳೆದುಕೊಂಡ ಕುಟುಂಬಗಳು ಅನುಭವಿಸುತ್ತಿರುವ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಈ ವಿಷಯದ ಕುರಿತು ಸಂಸದ ಕ್ಯಾ| ಬ್ರಿಜೇಶ್‌ ಚೌಟ ಅವರು ಬುಧವಾರ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆಯ ಸಚಿವ ಹರ್ದೀಪ್ ಸಿಂಗ್‌ ಪುರಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿದ್ದಾರೆ.

Advertisement

ಜೆಬಿಎಫ್‌ ಪೆಟ್ರೋಕೆಮಿಕಲ್ಸ್‌ ಮತ್ತು ಗೈಲ್‌ನ ವಿಲೀನದ ಸಮಸ್ಯೆಗಳ ಕುರಿತು ಚರ್ಚೆ ನಡೆಸುವಂತೆ ಸಂಸದರು ಮಾಡಿದ ಮನವಿ ಮೇರೆಗೆ ಹರ್ದೀಪ್ ಸಿಂಗ್‌ಪುರಿ ಅವರ ಅಧ್ಯಕ್ಷತೆಯಲ್ಲಿ ಮತ್ತು ಪೆಟ್ರೋಲಿಯಂ ಕಾರ್ಯದರ್ಶಿ ಪಂಕಜ್‌ ಜೈನ್‌, ಗೈಲ್‌ನ ಸಿಎಂಡಿ ಸಂದೀಪ್‌ ಗುಪ್ತಾ ಮತ್ತು ಜಿಎಂಪಿಎಲ್‌ ನ ಸಿಎಂಡಿ ಆಯುಷ್‌ ಗುಪ್ತಾ ಅವರ ಉಪಸ್ಥಿತಿಯಲ್ಲಿ ದಿಲ್ಲಿಯಲ್ಲಿ ವಿಶೇಷ ಸಭೆ ನಡೆಯಿತು.

ಮಂಗಳೂರು ವಿಶೇಷ ಆರ್ಥಿಕ ವಲಯದಲ್ಲಿ ಜಾಗ ಕಳೆದುಕೊಂಡ ಕುಟುಂಬಗಳನ್ನು ಜಿಎಂಪಿಎಲ್‌ನಲ್ಲಿ ಭರ್ತಿ ಮಾಡುವ ಕುರಿತು ಈ ಸಭೆಯಲ್ಲಿ ಚರ್ಚಿಸಲಾಯಿತು. ಸಮಸ್ಯೆಯನ್ನು ತ್ವರಿತವಾಗಿ ಪರಿಹರಿ ಸುವ ಭರವಸೆ ಸಚಿವರು ನೀಡಿದ್ದಾರೆ.

ಮೊದಲ ಅಧಿವೇಶನದ ಸಂದರ್ಭ ದಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದರು ಬಳಿಕ ಈ ಅಧಿವೇಶನದ ಸಂದರ್ಭದಲ್ಲಿ ಕೇಂದ್ರ ಸಿಬಂದಿ ಮತ್ತು ತರಬೇತಿ ಇಲಾಖೆ ಸಚಿವ ಡಾ| ಜಿತೇಂದ್ರ ಸಿಂಗ್‌ ಅವರನ್ನು ಭೇಟಿ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next