Advertisement

ಅಭಿವೃದ್ಧಿ ಕಾಮಗಾರಿಗಳಿಗೆ ಅಡ್ಡಿಯಾಗದು ಇಎಸ್ ಝೆಡ್‌!

11:39 AM Aug 10, 2020 | sudhir |

ಪರಿಸರ ಸೂಕ್ಷ್ಮ ವಲಯದ (ಇಎಸ್ ಝೆಡ್‌) ವ್ಯಾಪ್ತಿಯಲ್ಲಿ ಜಾರಿಗೊಳ್ಳುವ ರೈಲ್ವೇ ಯೋಜನೆಗಳು, 20,000 ಚದರಡಿಯ ವ್ಯಾಪ್ತಿಯಲ್ಲಿನ ಸಣ್ಣ ಪ್ರಮಾಣದ ಅಭಿವೃದ್ಧಿ ಕಾಮಗಾರಿಗಳು ಹಾಗೂ 25 ಮೆ. ವ್ಯಾಟ್‌ ಸಾಮರ್ಥಯದ ಜಲವಿದ್ಯುದಾಗಾರಗಳನ್ನು ನಿರ್ಮಿಸಲು ರಾಷ್ಟ್ರೀಯ ವನ್ಯಜೀವಿ ಮಂಡಳಿ(ಎನ್‌ಬಿಡಬ್ಲ್ಯೂ ಎಲ್‌)ಯಿಂದ ಅನುಮತಿ ಪಡೆಯುವ ಅಗತ್ಯವಿಲ್ಲವೆಂದು ಕೇಂದ್ರ ಪರಿಸರ ಸಚಿವಾಲಯ ಪ್ರಕಟಿಸಿದೆ. ಈ ಕುರಿತಂತೆ,  ಜುಲೈ 16 ಹಾಗೂ 24ರಂದು ಎಲ್ಲ ರಾಜ್ಯಗಳ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಪ್ರಧಾನ ಕಾರ್ಯದರ್ಶಿಗಳಿಗೆ ಸಚಿವಾಲಯ ಪತ್ರ ಬರೆದಿದೆ.

Advertisement

ಹಿಂದಿನ ನಿಯಮವೇನಿತ್ತು?
2011ರಲ್ಲಿ ಕೇಂದ್ರ ಪರಿಸರ ಇಲಾಖೆಯಿಂದ ಪ್ರಕಟವಾಗಿದ್ದ ನಿಯಮಾವಳಿಗಳ ಪ್ರಕಾರ,  ಇಎಸ್ ಝೆಡ್‌‌ ಸುತ್ತಲಿನ 10 ಕಿ.ಮೀ. ವ್ಯಾಪ್ತಿಯನ್ನು ಬಫ‌ರ್‌ ವಲಯಗಳೆಂದು ಗುರುತಿಸಲಾಗಿತ್ತು. ಆ ವಲಯಗಳಲ್ಲೂ ವನ್ಯಜೀವಿಗಳ ಸಂರಕ್ಷಣೆಗೆ ಒತ್ತು ಕೊಡಬೇಕೆಂದು ಸೂಚಿಸಲಾಗಿತ್ತು. ಅದಕ್ಕೂ ಮುನ್ನ 2002ರಲ್ಲಿ ಪ್ರಕಟಿಸಲಾಗಿದ್ದ ವನ್ಯಜೀವಿ ಸಂರಕ್ಷಣ ನಿಯಮಾಳಿಗಳಲ್ಲಿಯೂ ಇಎಸ್‌ ಝೆಡ್‌‌ ಸುತ್ತಲಿನ 10 ಕಿ.ಮೀ. ವ್ಯಾಪ್ತಿಯನ್ನು ಬಫ‌ರ್‌ ವಲಯವೆಂದು ಗುರುತಿಸುವಂತೆ ಸೂಚಿಸಲಾಗಿತ್ತು. 2006ರ ಡಿಸೆಂಬರ್‌ನಲ್ಲಿ ಸುಪ್ರೀಂ ಕೋರ್ಟ್‌ ಆದೇಶ ನೀಡಿ, 2002ರ ವನ್ಯಜೀವಿ ಸಂರಕ್ಷಣ ನಿಯಮಾವಳಿಗಳನ್ನು ಎಲ್ಲಾ ರಾಜ್ಯಗಳೂ, ಕೇಂದ್ರಾಡಳಿತ ಪ್ರದೇಶಗಳು ಕಡ್ಡಾಯವಾಗಿ ಅನುಸರಿಸಬೇಕೆಂದು ಸೂಚಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next