Advertisement

ಮೊಟ್ಟೆ ವಿತರಣೆಗೆ ವಿರೋಧ ಖಂಡಿಸಿ ಎಸ್‌ಎಫ್‌ಐ ಸಂಘಟನೆ ಪ್ರತಿಭಟನೆ

03:29 PM Dec 12, 2021 | Team Udayavani |

ಲಿಂಗಸುಗೂರು: ಅಪೌಷ್ಟಿಕತೆ ನಿವಾರಣೆಗಾಗಿ ಸರ್ಕಾರಿ ಶಾಲೆಗಳಲ್ಲಿ 1-8ನೇ ತರಗತಿಗಳ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಣೆಗೆ ಕೆಲ ಮಠಾಧಿಧೀಶರು ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಖಂಡಿಸಿ ಎಸ್‌ಎಫ್‌ಐ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟಿಸಿದರು.

Advertisement

ಕಲ್ಯಾಣ ಕರ್ನಾಟಕದ ಕೊಪ್ಪಳ, ಬೀದರ, ಯಾದಗಿರಿ, ಕಲಬುರಗಿ, ಬಳ್ಳಾರಿ ಮತ್ತು ರಾಯಚೂರು ಸೇರಿದಂತೆ ಬಿಜಯಪುರ ಜಿಲ್ಲೆಯಲ್ಲಿ 1ರಿಂದ 8ನೇ ತರಗತಿವರೆಗೆ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳು ಅಪೌಷ್ಟಿಕತೆ ಮತ್ತು ರಕ್ತ ಹೀನತೆಯಿಂದ ಬಳಲುತ್ತಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಸಮೀಕ್ಷಾ ವರದಿ ಹಿನ್ನೆಲೆಯಲ್ಲಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದೊಂದಿಗೆ ವಾರದಲ್ಲಿ 3 ದಿನಗಳ ಕಾಲ ಮೊಟ್ಟೆ ಮತ್ತು ಬಾಳೆಹಣ್ಣು ವಿತರಣೆ ಮಾಡುವ ರಾಜ್ಯ ಸರ್ಕಾರದ ಕ್ರಮ ಸ್ವಾಗತಾರ್ಹವಾಗಿದೆ.

ಆದರೆ ವಾರದಲ್ಲಿ 3 ದಿನಗಳ ಕಾಲ ಮೊಟ್ಟೆ ಮತ್ತು ಬಾಳೆಹಣ್ಣು ವಿತರಣೆ ಮಾಡುವ ಬಗ್ಗೆ ಕೆಲವು ಮಠದ ಸ್ವಾಮಿಗಳು ಜಾತಿ ಮತ್ತು ಧಾರ್ಮಿಕತೆ, ನಂಬಿಕೆಯ ಹೆಸರಿನಲ್ಲಿ ಸರ್ಕಾರದ ಆದೇಶವನ್ನು ವಾಪಸ್‌ ಪಡೆಯಬೇಕೆಂದು ರಾಜ್ಯದ ಮುಖ್ಯಮಂತ್ರಿಗಳ ಮೇಲೆ ಒತ್ತಡ ಹಾಕುತ್ತಿರುವುದು ಸರಿಯಲ್ಲ. ಇದು ಖಂಡನೀಯ. ಅಪೌಷ್ಟಿಕತೆ ನಿವಾರಣೆಗಾಗಿ ಮೊಟ್ಟೆ ಮತ್ತು ಬಾಳೆಹಣ್ಣನ್ನು ವಿತರಣೆ ಮಾಡಲು ಸರ್ಕಾರ ಮುಂದಾಗಬೇಕೆಂದು ಆಗ್ರಹಿಸಿದರು.

ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ರಮೇಶ ವೀರಾಪೂರು, ತಾಲೂಕಾಧ್ಯಕ್ಷ ತಿಪ್ಪಣ್ಣ ನಿಲೋಗಲ್‌, ಮಹ್ಮದ್‌ ಹನೀಫ್‌, ಪ್ರಹ್ಲಾದ್‌ ಕೋಠಾ, ನಾಗರಾಜ್‌ ಕೋಠಾ, ಮುದ್ದೇಶ, ರಹೀಂ ಇನ್ನಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next