Advertisement

Budget: ಈ ಬಾರಿಯ ಕೇಂದ್ರ ಬಜೆಟ್‌ ನಲ್ಲಿ ಸಮಿಶ್ರ ಸರಕಾರದ ಛಾಯೇ ಪ್ರತಿಫಲನ!

04:39 PM Jul 23, 2024 | Team Udayavani |

2024-2025ನೇ ಸಾಲಿನ ಕೇಂದ್ರದ ಬಜೆಟ್ ದೂರ ದೃಷ್ಟಿಯನ್ನು ಹೊಂದಿದ್ದು ಇದನ್ನು ಕಾರ್ಯಗತ ಮಾಡುವುದರ ಮೇಲೆ ಇದರ ಯಶಸ್ಸು ನಿಂತಿದೆ ಅನ್ನುವುದು ಅಷ್ಟೇ ಸತ್ಯ. ಹಿಂದೆ ಸ್ಮಾಟ೯ ಸಿಟಿ ಪ್ಲ್ಯಾನ್ ಬಂತು ಅದು ಎಷ್ಟರ ಮಟ್ಟಿಗೆ ಯಶಸ್ವಿಯಾಗಿದೆ ಅನ್ನುವುದು ಇಂದಿಗೂ ನಮ್ಮನ್ನು ಕಾಡುತ್ತಿರುವ ಮೊದಲ ಪ್ರಶ್ನೆ. ಈ ಬಜೆಟ್‌ ನಲ್ಲಿ ಎದ್ದು ಕಾಣುವಂತಿದೆ.

Advertisement

ನಮ್ಮಲ್ಲಿ 28 ರಾಜ್ಯಗಳಿವೆ 8 ಕೇಂದ್ರಾಡಳಿತ ಪ್ರದೇಶಗಳು ಇವೆ. ಆದರೆ ಬಜೆಟ್ ಉದ್ದಕ್ಕೂ ಧ್ವನಿಸಿದ ಮಾತು ಬಿಹಾರ ಮತ್ತು ಆಂಧ್ರ ಪ್ರದೇಶ ಮಾತ್ರ..ಇವುಗಳಿಗೆ ಈ ಬಜೆಟ್ ಹೆಚ್ಚಿನ ಅನುದಾನ ನೀಡಿದೆ. ತೆರಿಗೆ ಸರಳೀಕೃತ ಗೊಳಿಸಿರುವುದು ಉತ್ತಮ ನಿಣ೯ಯ. ಉದ್ಯೋಗ ಸೃಷ್ಟಿ ಮಾಡಲು ಅನುಕೂಲಕರ ಬಜೆಟ್ ಎಂದು ವ್ಯಾಖ್ಯಾನಿಸಲಾಗಿದೆ.ಈ ಬಾರಿಯಾದರೂ ಕನಸು ನನಸಾಗ ಬಹುದಾ ಕಾದು ನೇೂಡ ಬೇಕು.

ಒಂದಂತು ಸತ್ಯ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಉತ್ತಮ ಹೊಂದಾಣಿಕೆ ಸೃಷ್ಟಿಯಾದಾಗ ಮಾತ್ರ ಈ ಬಜೆಟ್ ನ ಪ್ರತಿಫಲ ಜನರಿಗೆ ಸಮರ್ಪಕವಾಗಿ ತಲುಪಲು ಸಾಧ್ಯ.

ಪ್ರೊ.ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಉಡುಪಿ.

Advertisement

ನಿವೃತ್ತ ರಾಜ್ಯ ಶಾಸ್ತ್ರ ಮುಖ್ಯಸ್ಥ ಎಂಜಿಎಂ. ಕಾಲೇಜು ಉಡುಪಿ.

Advertisement

Udayavani is now on Telegram. Click here to join our channel and stay updated with the latest news.

Next