Advertisement

ಶಾ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ

08:27 AM Jan 26, 2018 | Team Udayavani |

ಬೆಂಗಳೂರು: ಮಹದಾಯಿ ವಿಚಾರವಾಗಿ ಕರ್ನಾಟಕ ಬಂದ್‌ ನಡೆಯುತ್ತಿರುವಾಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಪರಿವರ್ತನಾ ಯಾತ್ರೆಯಲ್ಲಿ ಆ ವಿಷಯವೇ ಪ್ರಸ್ತಾಪ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಮಹದಾಯಿ ಬಿಕ್ಕಟ್ಟಿಗೆ ಪರಿಹಾರ ಕೊಡಿಸದ ಹೊರತು ಬಿಜೆಪಿ ರಾಷ್ಟ್ರೀಯ ನಾಯಕರು ಇಲ್ಲಿ ಬಂದು ಭಾಷಣ ಮಾಡಲು ನೈತಿಕತೆ ಇರುವುದಿಲ್ಲ ಎಂದು ಹೇಳಿದರು. ಮಹದಾಯಿ ನದಿ ನೀರಿಗಾಗಿ 2 ವರ್ಷದಿಂದ ಹೋರಾಟ ನಡೆಯುತ್ತಿದೆ. ಪರಿವರ್ತನಾ ಯಾತ್ರೆಯಲ್ಲಿ ಅದರ ಬಗ್ಗೆ ಅಮಿತ್‌ ಶಾ ಮಾತನಾಡುವುದು ಬಿಟ್ಟು ಸುಳ್ಳುಗಳ ಸರಮಾಲೆ ಜೋಡಿಸಿ ಹೋಗಿದ್ದಾರೆಂದು ಟೀಕಿಸಿದರು. ಸಮಾವೇಶಕ್ಕೆ ಬಂದು ಸುಳ್ಳುಗಳನ್ನು ಹೇಳಿ ಹೋಗುವುದಲ್ಲ. ವಿವಾದ ಬಗೆಹರಿಸಲು ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ಮೇಲೆ ಒತ್ತಡ ಹೇರಲಿ. ಆಗ ಇಲ್ಲಿಗೆ ಬಂದು ಮಾತನಾಡಲು ನೈತಿಕತೆ ಇರುತ್ತದೆ ಎಂದರು.

ಪ್ರಧಾನಿಯವರು ಫೆ.4 ರಂದು ಇಲ್ಲಿಗೆ ಬರುತ್ತಿದ್ದಾರೆ. ಮಹದಾಯಿ ವಿವಾದ ಬಗೆಹರಿಸಲು ನಾನು ಮಧ್ಯಸ್ಥಿಕೆ ವಹಿಸುತ್ತೇನೆಂದು ಘೋಷಣೆ ಮಾಡಲಿ ನೋಡೋಣ ಎಂದು ಸವಾಲು ಹಾಕಿದರು. ಅನುದಾನ ಹೆಚ್ಚು ಕೊಟ್ಟಿದ್ದೇವೆಂದು ಅವರು ಲೆಕ್ಕ ಹೇಳುತ್ತಾರೆ. ಹಣಕಾಸು ಆಯೋಗದ ಶಿಫಾರಸು ಪ್ರಕಾರ ಆನುದಾನ ಕೊಡುವುದೇ ಹೊರತು ಇದರಲ್ಲಿ ಕೇಂದ್ರದ ಹೆಚ್ಚುಗಾರಿಕೆ ಏನಿದೆ ಎಂದು ಪ್ರಶ್ನಿಸಿದರು. 

Advertisement

Udayavani is now on Telegram. Click here to join our channel and stay updated with the latest news.

Next