Advertisement

ಹದಗೆಟ್ಟ ನೈರ್ಮಲ್ಯ: ನಗರಸಭೆ ನಿರ್ಲಕ್ಷ್ಯ

01:22 PM Dec 06, 2019 | Naveen |

ಶಹಾಪುರ: ನಗರದ ಹಲವು ವಾರ್ಡ್‌ಗಳಲ್ಲಿ ಕಸದ ರಾಶಿ, ಚರಂಡಿ ನೀರು ಸಂಗ್ರಹದಿಂದ ಗಬ್ಬೆದ್ದು ದುರ್ವಾಸನೆ ಕಾಡುತ್ತಿದ್ದು, ನಗರಸಭೆ ನಿರ್ಲಕ್ಷ್ಯ ವಹಿಸಿದೆ ಎಂದು ನಾಕರಿಕರು ಆರೋಪಿಸಿದ್ದಾರೆ.

Advertisement

ನಗರಸಭೆ ಚುನಾವಣೆ ಮುಗಿದು 6 ತಿಂಗಳಾಗಿದೆ. ನಗರಸಭೆಗೆ ಆಯ್ಕೆಯಾದ ಸದಸ್ಯರಿಗೆ ತಾಂತ್ರಿಕ ಕಾರಣದಿಂದ ಇನ್ನೂ ಅಧಿಕಾರ ಸಿಕ್ಕಿಲ್ಲ. ಅಲ್ಲದೇ ಅಧಿಕಾರಿಗಳು ಸ್ವತ್ಛತೆ ಕಡೆಗೆ ಗಮನಹರಿಸಿಲ್ಲ. ನಗರದ ಕೆಲ ಭಾಗದಲ್ಲಿ ಡೆಂಘೀ, ಚಿಕೂನ್‌ಗುನ್ಯಾ ಜ್ವರ ಹರಡಿದೆ. ನಗರದ ಸರ್ಕಾರಿ ಆಸ್ಪತ್ರೆ ಅಧಿಕಾರಿಗಳು ಎರಡು ಮೂರು ದಿನ ನಗರದಲ್ಲಿ ಸಂಚರಿಸಿ ಜಾಗೃತಿ ಮೂಡಿಸಿದರು. ಬಳಿಕ ಕೈತೊಳೆದುಕೊಂಡು ಬಿಟ್ಟರು ಎಂಬಂತೆ ಕಾಣುತ್ತಿದೆ. ಸಾಂಕ್ರಾಮಿಕ ರೋಗ, ಡೆಂಘೀ ಮತ್ತು ಚಿಕೂನ್‌ ಗುನ್ಯಾ ಭೀತಿ ಕಡಿಮೆಯಾಗಿಲ್ಲ.

ಚಾಮುಂಡೇಶ್ವರಿ ನಗರದಲ್ಲಿ ಸಾಂಕ್ರಾಮಿಕ ರೋಗಗಳಿಂದ ಬಳಲುತ್ತಿರುವುದು ಕಂಡು ಬಂದಿದೆ.  ಅಲ್ಲಿಯೇ ಆರೋಗ್ಯ ಇಲಾಖೆ ಪ್ರಾಥಮಿಕ ಆರೋಗ್ಯ ಕೇಂದ್ರ ಇದೆ. ಆದರೂ ನಿಯಂತ್ರಣ ಮಾಡಲು ಸಾಧ್ಯವಾಗಿಲ್ಲ. ನಗರಸಭೆ ಬಡಾವಣೆ ಸ್ವಚ್ಚತೆಗೊಳಿಸಿದರುವುದೇ ಇದಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ.

ಗಣೇಶ ನಗರ, ಶರಣಬಸವೇಶ್ವರ, ಸಂಗಮೇಶ್ವರ ನಗರಗಳಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲ. ಹೀಗಾಗಿ ಎಲ್ಲೆಂದರಲ್ಲಿ ಚರಂಡಿ ನೀರು ಸಂಗ್ರಹವಾಗಿ ಗಬ್ಬೆದ್ದು ನಾರುತ್ತಿದೆ. ಇದರಿಂದ ಸೊಳ್ಳೆ, ಕ್ರಿಮಿಕೀಟಗಳ ಕಾಟ ಜಾಸ್ತಿಯಾಗಿದೆ. ಹೀಗಾಗಿ ಉತ್ತಮ ನೈರ್ಮಲ್ಯ ಒದಗಿಸಬೇಕಿದ್ದ ನಗರಸಭೆ ನಿದ್ರೆಗೆ ಜಾರಿದೆ ಎಂದು ವಾರ್ಡ್‌ ನಾಗರಿಕರು ಆರೋಪಿಸಿದ್ದಾರೆ.

ಕೆಲವು ವಾರ್ಡ್‌ಗಳಲ್ಲಿ ನಿವಾಸಿಗಳು ಮನೆ ತಲುಪಬೇಕಾದರೆ ಮೂಗು ಮುಚ್ಚಿಕೊಂಡು ಕೆಸರು ಗದ್ದೆಯಂತ ರಸ್ತೆಯಲ್ಲಿಯೇ ಹೋಗಬೇಕಾದ ಅನಿವಾರ್ಯತೆ ಇದೆ. ಈ ಬಗ್ಗೆ ಸಾಕಷ್ಟು ಬಾರಿ ಮನವಿ ಮಾಡಿದರು ಕೂಡ ನಗರಸಭೆ ಸ್ಪಂದಿಸುತ್ತಿಲ್ಲ.

Advertisement

ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಸದ ಗೂಡು ಕೆಸರು ಗದ್ದೆಯಾದ ರಸ್ತೆಯಲ್ಲಿಯೇ ದಿನನಿತ್ಯದ ಬದುಕು ಸಾಗಿಸಬೇಕಾಗಿದೆ ಎಂದು ನಾಗರಿಕರು ದೂರಿದ್ದಾರೆ.

ಚಾಮುಂಡೇಶ್ವರಿ ನಗರದಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲ. ಚರಂಡಿ ನೀರು ಸಂಗ್ರಹವಾಗಿ ಕೆರೆಯಂತಾಗಿದೆ. ಸಾಕಷ್ಟು ಬಾರಿ ನಗರಸಭೆ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಸಾಯಬಣ್ಣ ನಾಶಿ,
ಚಾಮುಂಡಿ ಬಡಾವಣೆ

ನಗರದ ಹಲವಡೆ ಚರಂಡಿ ಅಸಮರ್ಪಕತೆಯಿಂದ ಕೊಳಚೆ ನೀರು ಸಂಗ್ರಹವಾಗಿ ಗಬ್ಬೆದ್ದು ನರುತ್ತಿದೆ. ನಗರಸಭೆ ಅಧಿಕಾರಿಗಳು ಸ್ವತ್ಛತೆಗೆ ಕ್ರಮ ಕೈಗೊಳ್ಳಬೇಕು. ಅಂಗಡಿ, ಮುಂಗಟ್ಟುಗಳ ಸಹ ಕಸದ ರಾಶಿಯನ್ನು ಎಲ್ಲೆಂದರಲ್ಲಿ ಎಸೆಯಲಾಗುತ್ತಿದೆ.

ತ್ಯಾಜ್ಯ ವಿಲೇವಾರಿ ಸಮರ್ಪಕವಾಗಿ ನಡೆಯಬೇಕು. ಹೆದ್ದಾರಿ ಪಕ್ಕದಲ್ಲಿ ತ್ಯಾಜ್ಯ ಎಸೆಯಲಾಗುತ್ತಿದೆ. ಅದನ್ನು ನಿಲ್ಲಿಸಬೇಕು. ಬಡಾವಣೆ ಸ್ವಚ್ಛತೆಗೆ ನಗರಸಭೆ ಆದ್ಯತೆ ನೀಡಬೇಕು.
ನಂದಕುಮಾರ ಚಿಲ್ಲಾಳ,
 ನಗರ ವಾಸಿ

Advertisement

Udayavani is now on Telegram. Click here to join our channel and stay updated with the latest news.

Next