Advertisement

ಭವನ ನಿರ್ಮಾಣ ಕಾರ್ಯ ಶೀಘ್ರ: ದರ್ಶನಾಪುರ

12:47 PM May 29, 2020 | Naveen |

ಶಹಾಪುರ: ಹೋತಪೇಟ ಗ್ರಾಮದ ಕೈಲಾಸ ಆಶ್ರಮದಲ್ಲಿ 17 ಲಕ್ಷ ರೂ. ವೆಚ್ಚದಲ್ಲಿ ಸಮುದಾಯ ಭವನ ನಿರ್ಮಿಸಲಾಗುವುದು. ಶೀಘ್ರದಲ್ಲಿಯೇ ಕೆಲಸ ಆರಂಭವಾಗಲಿದೆ ಎಂದು ಶಾಸಕ ಶರಣಬಸಪ್ಪ ದರ್ಶನಾಪುರ ತಿಳಿಸಿದರು.

Advertisement

ಹೋತಪೇಟ ಗ್ರಾಮದ ಕೈಲಾಸ ಆಶ್ರಮಕ್ಕೆ ಗುರುವಾರ ಭೇಟಿ ನೀಡಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ಸಮುದಾಯ ಭವನ ನಿರ್ಮಾಣದಿಂದ ಹೆಚ್ಚು ಅನುಕೂಲವಾಗುತ್ತವೆ. ಆಯಾ ಸಮುದಾಯದವರು ಅಲ್ಲಿನ ಸಮುದಾಯ ಭವನಕ್ಕೆ ಆಗಮಿಸಿ ಮಂಗಲ ಕಾರ್ಯ ಹಾಗೂ ಇನ್ನಿತರ ಸಾರ್ವಜನಿಕ ಕಾರ್ಯಕ್ರಮಗಳಿಗೆ ಹೆಚ್ಚು ಅನುಕೂಲವಾಗುತ್ತದೆ. ಆದರೆ ಭವನ ನಿರ್ಮಾಣ ಮಾಡಿದರೆ ಸಾಲದು ಅದರ ಜತೆಗೆ ಅದರ ನಿರ್ವಹಣೆಯು ಅಷ್ಟೆ ಮುಖ್ಯವಾಗಿದೆ. ಸ್ವಚ್ಛತೆ ಮತ್ತು ಸುರಕ್ಷತೆಗೆ ಒತ್ತು ನೀಡಬೇಕು. ಶ್ರೀಮಠದ ಆವರಣ ಸೇರಿದಂತೆ ಸುತ್ತಲು ಮರಗಳನ್ನು ನೆಡುವುದರ ಮೂಲಕ ಹಸಿರು ವನವನ್ನಾಗಿ ರೂಪಿಸಬೇಕು. ಕುಡಿಯುವ ನೀರು ಮುಂತಾದ ಮೂಲ ಸೌಲಭ್ಯಗಳನ್ನು ಸುಸಜ್ಜಿತವಾಗಿ ಇರಿಸುವುದು ಅಗತ್ಯ ಎಂದರು.

ಗ್ರಾಮೀಣ ಪ್ರದೇಶದಲ್ಲಿ ಸದ್ಯಕ್ಕೆ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಇಷ್ಟರಲ್ಲಿಯೇ ಮಳೆಗಾಲ ಆರಂಭವಾಗಲಿದೆ. ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗುವರು. ಕೋವಿಡ್  ಭೀತಿ ನಡುವೆ ನಾವು ಜೀವನವನ್ನು ಮುನ್ನಡಸುವುದು ಅಗತ್ಯವಾಗಿದೆ. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸುರಕ್ಷಿತ ಅಂತರ ಕಾಪಾಡಿಕೊಳ್ಳಬೇಕು. ಆಗಾಗ ಕೈ ತೊಳೆದುಕೊಳ್ಳಬೇಕು ಎಂದು ಸಲಹೆ ನೀಡಿದರು. ಕೈಲಾಸ ಆಶ್ರಮದ ಶಿವಲಿಂಗ ಶರಣರು, ಶಿವಮಹಾಂತ ಚಂದಾಪುರ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next