Advertisement

ಬಿಜೆಪಿ ಯೋಜನೆ ಮನೆ ಮನೆಗೆ ತಿಳಿಸಿ

01:16 PM Aug 03, 2019 | Naveen |

ಶಹಾಪುರ: ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಯಾದ ಮೇಲೆ ದೇಶದಲ್ಲಿ ಬಿಜೆಪಿ ಶಕ್ತಿ ಹೆಚ್ಚಾಗಿದೆ. ಅವರ ಜನಪ್ರಿಯ ಯೋಜನೆಗಳು ಮತ್ತು ದೇಶಕ್ಕಾಗಿ ಕೈಗೊಂಡ ಹಲವಾರು ಐತಿಹಾಸಿಕ ನಿರ್ಣಯಗಳು ಮನೆಮಾತಾಗಿದೆ ಎಂದು ಬಿಜೆಪಿ ಜಿಲ್ಲಾ ಸದಸ್ಯತ್ವ ಅಭಿಯಾನದ ಸಂಚಾಲಕ ಶರಣಗೌಡ ಬಾಡಿಯಾಲ ತಿಳಿಸಿದರು.

Advertisement

ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸಂಘಟನಾ ಪರ್ವ ಬಿಜೆಪಿ ಸದಸ್ಯತ್ವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಈ ಹಿಂದೆ ಬಿಜೆಪಿ ಸದಸ್ಯತ್ವ ಪಡೆಯಲು ಜನರ ಹಿಂದೆ ಬೀಳಬೇಕಿತ್ತು. ಆದರೆ ಈಗ ಸ್ಥಿತಿ ಸಂಪೂರ್ಣ ಬದಲಾಗಿದೆ. ಬಿಜೆಪಿ ಜಗತ್ತಿನಲ್ಲಿಯೇ ಅತಿ ಹೆಚ್ಚು ಸದಸ್ಯತ್ವ ಹೊಂದಿದ್ದ ದೊಡ್ಡ ಪಕ್ಷವಾಗಿದೆ. ಅದರಂತೆ ರಾಜ್ಯ ಬಿಜೆಪಿ ಘಟಕ ಹೊಂದಿದ ಸದಸ್ಯತ್ವ ಗುರಿ ತಲುಪಬೇಕಿದೆ. ಆ ನಿಟ್ಟಿನಲ್ಲಿ ಕಾರ್ಯಕರ್ತರು ಮನೆ ಮನೆ ತೆರಳಿ ಬಿಜೆಪಿ ಕೈಗೊಂಡ ಹಲವಾರು ಯೋಜನೆಗಳು ಕುರಿತು ಜನರಿಗೆ ಮನವರಿಕೆ ಮಾಡಬೇಕು ಎಂದರು.

ಪ್ರತಿ ಮನೆಯಲ್ಲಿ ಮಹಿಳೆಯರು ಬಿಜೆಪಿ ಸದಸ್ಯತ್ವ ಪಡೆಯಲು ಮುಂದೆ ಬರುತ್ತಿದ್ದಾರೆ. ಇದಕ್ಕೆಲ್ಲ ಪ್ರಧಾನಿ ಮೋದಿ ಅವರ ಕಾರ್ಯವೈಖರಿ ಮತ್ತು ದೇಶದ ಅಭಿವೃದ್ಧಿಗಾಗಿ ರಾತ್ರಿ ಹಗಲು ಎನ್ನದೆ ಶ್ರಮಿಸುತ್ತಿರುವ ಅವರ ಪ್ರಾಮಾಣಿಕ ಪರಿಶ್ರಮ ಕುರಿತು ಜನ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ ಎಂದರು.

ಹೀಗಾಗಿ ಜನರು ಸದಸ್ಯತ್ವ ಪಡೆಯಲು ಕೇವಲ ಪಕ್ಷ ತಿಳಿಸಿದ 8980808080 ಸಂಖ್ಯೆಗೆ ಮಿಸ್‌ ಕಾಲ್ ಮಾಡಿದ್ದಲ್ಲಿ ಸದಸ್ಯತ್ವ ನೋಂದಣಿಯಾಗಲಿದೆ. ಮೊಬೈಲ್ಗೆ ನೋಂದಣಿ ಸಂಖ್ಯೆ ಬರಲಿದೆ. ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

Advertisement

ಜಿಲ್ಲಾ ಬಿಜೆಪಿ ಅಧ್ಯಕ್ಷ ಚಂದ್ರಶೇಖರ ಮಾಗನೂರ, ಡಾ| ಚಂದ್ರಶೇಖರ ಸುಬೇದಾರ ಮಾತನಾಡಿದರು. ಮುಖಂಡರಾದ ಮಲ್ಲಣ್ಣ ಮಡ್ಡಿ, ನಗರ ಅಧ್ಯಕ್ಷ ಲಾಲನಸಾಬ ಖುರೇಶಿ, ಮಲ್ಲಿಕಾರ್ಜುನ ಚಿಲ್ಲಾಳ, ಗುರು ಕಾಮಾ, ರವಿ ನರಸನಾಯಕ, ಶಾಂತಪ್ಪ ಕಟ್ಟಿಮನಿ, ಉಮೇಶ ಮಹಾಮನಿ, ಅಬ್ದುಲ್ ಹಾದಿಮನಿ, ಕರಿಬಸವ ಬಿರಾಳ ಸೇರಿದಂತೆ ಇತರರು ಇದ್ದರು. ಇದೇ ಸಂದರ್ಭದಲ್ಲಿ ಸದಸ್ಯತ್ವಕ್ಕೆ ಸಂಬಂಧಿಸಿದಂತೆ ಕರಪತ್ರ ವಿತರಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next