Advertisement

ಶಾಹಡ್‌ ಶ್ರೀ ಮೂಕಾಂಬಿಕಾ ಮಂದಿರ: ಪ್ರತಿಷ್ಠಾ ವರ್ಧಂತಿ

04:31 PM Jun 26, 2018 | |

ಕಲ್ಯಾಣ್‌: ಶ್ರೀ ನಿತ್ಯಾನಂದ ಮಿತ್ರ ಭಜನಾ ಮಂಡಳಿ ಸಂಚಾಲಕತ್ವದ ಶಾಹಡ್‌ ಬಿರ್ಲಾ ಗೇಟ್‌ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನದ ತೃತೀಯ ವಾರ್ಷಿಕ ಪ್ರತಿಷ್ಠಾ ವರ್ಧಂತಿ ಉತ್ಸವವು ಜೂ. 22 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿತು.

Advertisement

ಧಾರ್ಮಿಕ ಕಾರ್ಯಕ್ರಮವಾಗಿ ಡೊಂಬಿವಲಿಯ ಶ್ರೀ ಶಂಕರನಾರಾ ಯಣ ತಂತ್ರಿ ಅವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮವಾಗಿ ಬೆಳಗ್ಗೆ 8 ರಿಂದ ಸಾಮೂಹಿಕ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹ ವಾಚನ, ಮಹಾಗಣಪತಿ ಹೋಮ, ಪ್ರಸನ್ನ ಗಣಪತಿ ದೇವರಿಗೆ ನವಕ ಕಲಶಾರಾಧನೆ, ಪ್ರಧಾನ ಹೋಮ, ಶ್ರೀದೇವಿಯ ಸನ್ನಿಧಿಯಲ್ಲಿ 25 ಕಲಶಾರಾಧನೆ, ಪ್ರಧಾನ ಹೋಮ, ಪಂಚಾಮೃತ ಅಭಿಷೇಕ, ಕಲಶಾಭಿಷೇಕ, ಮಹಾಪೂಜೆ, ಪಲ್ಲಪೂಜೆ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿತು.
ಜಯ ಪ್ರಸಾದ್‌ ಶೆಟ್ಟಿ ಮತ್ತು ಕುಟುಂಬಿಕರ ಸೇವಾರ್ಥಕವಾಗಿ ನಡೆದ  ಅನ್ನಸಂತರ್ಪಣೆಯಲ್ಲಿ ನೂರಾರು ಭಕ್ತಾದಿಗಳು ಉಪಸ್ಥಿತ ರಿದ್ದು ಪ್ರಸಾದ ಸ್ವೀಕರಿಸಿದರು. ಸಂಜೆ 6 ರಿಂದ ಕುಂಕುಮಾರ್ಚನೆ, ಲಲಿತಾ ಸಹಸ್ರನಾಮಾರ್ಚನೆ, ಮಹಾಪೂಜೆ, ರಂಗಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆಯನ್ನು ಆಯೋಜಿಸಲಾಗಿತ್ತು. ಮಂದಿರದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ಸದಸ್ಯೆಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. 

ಅನ್ನದಾನ ಸೇವೆಗೈದ ಜಯ ಪ್ರಸಾದ್‌ ಶೆಟ್ಟಿ ದಂಪತಿಯನ್ನು ಇದೇ ಸಂದರ್ಭದಲ್ಲಿ ಮಹಾ ಪ್ರಸಾದ ವನ್ನಿತ್ತು ಗೌರವಿಸಲಾಯಿತು. ಸ್ಥಳೀಯ ವಿವಿಧ ತುಳು-ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು, ದಾನಿ ಗಳು, ಸ್ಥಳೀಯ ಉದ್ಯಮಿಗಳು, ಗಣ್ಯರು ಪಾಲ್ಗೊಂಡರು. 

Advertisement

Udayavani is now on Telegram. Click here to join our channel and stay updated with the latest news.

Next