Advertisement
ಧಾರ್ಮಿಕ ಕಾರ್ಯಕ್ರಮವಾಗಿ ಡೊಂಬಿವಲಿಯ ಶ್ರೀ ಶಂಕರನಾರಾ ಯಣ ತಂತ್ರಿ ಅವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮವಾಗಿ ಬೆಳಗ್ಗೆ 8 ರಿಂದ ಸಾಮೂಹಿಕ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹ ವಾಚನ, ಮಹಾಗಣಪತಿ ಹೋಮ, ಪ್ರಸನ್ನ ಗಣಪತಿ ದೇವರಿಗೆ ನವಕ ಕಲಶಾರಾಧನೆ, ಪ್ರಧಾನ ಹೋಮ, ಶ್ರೀದೇವಿಯ ಸನ್ನಿಧಿಯಲ್ಲಿ 25 ಕಲಶಾರಾಧನೆ, ಪ್ರಧಾನ ಹೋಮ, ಪಂಚಾಮೃತ ಅಭಿಷೇಕ, ಕಲಶಾಭಿಷೇಕ, ಮಹಾಪೂಜೆ, ಪಲ್ಲಪೂಜೆ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿತು.ಜಯ ಪ್ರಸಾದ್ ಶೆಟ್ಟಿ ಮತ್ತು ಕುಟುಂಬಿಕರ ಸೇವಾರ್ಥಕವಾಗಿ ನಡೆದ ಅನ್ನಸಂತರ್ಪಣೆಯಲ್ಲಿ ನೂರಾರು ಭಕ್ತಾದಿಗಳು ಉಪಸ್ಥಿತ ರಿದ್ದು ಪ್ರಸಾದ ಸ್ವೀಕರಿಸಿದರು. ಸಂಜೆ 6 ರಿಂದ ಕುಂಕುಮಾರ್ಚನೆ, ಲಲಿತಾ ಸಹಸ್ರನಾಮಾರ್ಚನೆ, ಮಹಾಪೂಜೆ, ರಂಗಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆಯನ್ನು ಆಯೋಜಿಸಲಾಗಿತ್ತು. ಮಂದಿರದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ಸದಸ್ಯೆಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.