Advertisement

ಶಾ ಆಪ್ತ ಅರುಣ್‌ಸಿಂಗ್‌ ಕರ್ನಾಟಕ ಪ್ರವಾಸ

06:45 AM Dec 23, 2017 | Team Udayavani |

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರ ತಂಡ ರಾಜ್ಯದಲ್ಲಿ ಈಗಾಗಲೇ ಕೆಲಸ ಆರಂಭಿಸಿದೆ. ಅಮಿತ್‌ ಶಾ ತಂಡದ ಪ್ರಮುಖ ಸದಸ್ಯ ಅರುಣ್‌ ಸಿಂಗ್‌ ಅವರು ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಪ್ರವಾಸ ನಡೆಸುತ್ತಿದ್ದಾರೆ.

Advertisement

ಚುನಾವಣಾ ಸಿದ್ಧತೆಗಳ ಕುರಿತಂತೆ ಚರ್ಚಿಸಲು ಅಮಿತ್‌ ಶಾ ಡಿಸೆಂಬರ್‌ ಕೊನೇ ವಾರ ಅಥವಾ ಜನವರಿ ಮೊದಲ ವಾರದಲ್ಲಿ ರಾಜ್ಯಕ್ಕೆ ಬರುವ ಸಾಧ್ಯತೆ ಇದ್ದು, ಇದಕ್ಕೆ ಮುನ್ನ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್‌ ಸಿಂಗ್‌ ಅವರು ಕೆಲಸ ಆರಂಭಿಸಿದ್ದಾರೆ. ಶೀಘ್ರದಲ್ಲೇ ಮತ್ತೂಬ್ಬ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್‌ ಕೂಡ ರಾಜ್ಯಕ್ಕೆ ಬರುವ ನಿರೀಕ್ಷೆ ಇದೆ.

ಗುರುವಾರ ದಾವಣಗೆರೆ ಮತ್ತು ತುಮಕೂರು ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದ ಅರುಣ್‌ ಸಿಂಗ್‌ ಅವರು ಶುಕ್ರವಾರ ಬೆಂಗಳೂರಿನಲ್ಲಿ ಪಕ್ಷ ಸಂಘಟನೆ ಕುರಿತಂತೆ ಹಲವು ಮುಖಂಡರ ಜತೆ ಸಮಾಲೋಚನೆ ನಡೆಸಿದ್ದಾರೆ. ಪಕ್ಷದ ಕಚೇರಿಗೂ ಭೇಟಿ ನೀಡಿ ಅನೇಕ ಮಾಹಿತಿ ಪಡೆದಿದ್ದಾರೆ. ಸಂಘಟನೆ ಬಲಪಡಿಸುವ ಕುರಿತಂತೆ ಅರುಣ್‌ ಸಿಂಗ್‌ ಅವರು ರಾಜ್ಯಕ್ಕೆ ಆಗಮಿಸಿದ್ದಾರೆ ಎಂದು ಮೂಲಗಳು ಹೇಳಿವೆ.

Advertisement

Udayavani is now on Telegram. Click here to join our channel and stay updated with the latest news.

Next