Advertisement

ಶಂಕರನಾರಾಯಣ: ಅಕ್ರಮ ಮರಳುಗಾರಿಕೆ ಧಕ್ಕೆಗೆ ದಾಳಿ; 2 ಟಿಪ್ಪರ್‌ ವಶ

11:44 PM Feb 24, 2023 | Team Udayavani |

ಸಿದ್ದಾಪುರ: ಕುಂದಾಪುರ ತಾಲೂಕು ಶಂಕರನಾರಾಯಣ ಗ್ರಾಮದ ಭರತ್ಕಲ್‌ ಎಂಬಲ್ಲಿ ವಾರಾಹಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು 2 ಲಾರಿಗಳಿಗೆ ತುಂಬಿಸಿದ ಮರಳನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.

Advertisement

ಶಂಕರನಾರಾಯಣ ಗ್ರಾಮದ ಭರತ್ಕಲ್‌ನಲ್ಲಿ ವಾರಾಹಿ ನದಿಯಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ದೂರು ಬಂದ ಹಿನ್ನೆಲೆಯಲ್ಲಿ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದರು. ಹಿರಿಯ ಭೂವಿಜ್ಞಾನಿ ಸಂದೀಪ್‌ ಜಿ.ಯು. ಅವರ ಮಾರ್ಗದರ್ಶನದಲ್ಲಿ ಭೂ ವಿಜ್ಞಾನಿ ಸಂಧ್ಯಾ ಅವರು ಶುಕ್ರವಾರ ಮುಂಜಾನೆ ಕಾರ್ಯಾಚರಣೆ ನಡೆಸಿ ಮರಳು ಧಕ್ಕೆಯಲ್ಲಿದ್ದ ಎರಡು ಲಾರಿಗಳನ್ನು ವಶಕ್ಕೆ ಪಡೆದರು.

ಪ್ರಕರಣ ದಾಖಲಿಸಿಕೊಂಡ ಗಣಿ ಇಲಾಖೆಯ ಆಧಿಕಾರಿಗಳು ಮುಂದಿನ ಕಾನೂನು ಕ್ರಮಕ್ಕಾಗಿ ಮರಳು ಸಾಗಾಣಿಕೆಗೆ ಬಳಸುತ್ತಿದ್ದ 2 ಲಾರಿ ಹಾಗೂ 5 ಮೆಟ್ರಿಕ್‌ ಟನ್‌ ಮರಳನ್ನು ಶಂಕರನಾರಾಯಣ ಪೊಲೀಸ್‌ ಠಾಣೆ ವಶಕ್ಕೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next