Advertisement

ಶಾಮನೂರು ಕೈ ತಪ್ಪಿದ ಸಚಿವ ಸ್ಥಾನ;ಕಾರ್ಪೋರೇಟರ್‌ ರಾಜೀನಾಮೆ

04:13 PM Jun 06, 2018 | Team Udayavani |

ದಾವಣಗೆರೆ: ಸಮ್ಮಿಶ್ರ ಸರ್ಕಾರದ ಸಂಪುಟದಲ್ಲಿ ಹಿರಿತನದ ಆಧಾರದಲ್ಲಿ ಸಚಿವ ಸ್ಥಾನ ದೊರಕುತ್ತದೆ ಎಂದು ನಿರೀಕ್ಷೆ ಇಟ್ಟುಕೊಂಡಿದ್ದ ಶಾಮನೂರು ಶಿವಶಂಕರಪ್ಪ ಅವರಿಗೆ ನಿರಾಸೆಯಾಗಿದ್ದು, ಬೆಂಬಲಿಗರು ಕಾಂಗ್ರೆಸ್‌ ಹೈಕಮಾಂಡ್‌ ವಿರುದ್ಧ ಬಹಿರಂಗ ಆಕ್ರೋಶ ಹೊರ ಹಾಕಿದ್ದಾರೆ. 

Advertisement

ಕಾರ್ಪೋರೇಟರ್‌ ರಾಜೀನಾಮೆ 
ದಾವಣಗೆರೆಯ ಕೆಟಿಜೆ ನಗರ ಕಾರ್ಪೋರೇಟರ್‌ ಶಿವಗಂಗಾ ಬಸವರಾಜ್‌ ಅವರು ತಮ್ಮ ಸ್ಥಾನಕ್ಕೆ  ರಾಜೀನಾಮೆ ನೀಡಿ  ಆಕ್ರೋಶ ಹೊರ ಹಾಕಿದ್ದಾರೆ. 

ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ರಾಗಿದ್ದ ಶಿವಶಂಕರಪ್ಪ ಅವರಿಗೆ ಸಚಿವ ಸ್ಥಾನ ನೀಡದೆ ಇರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. 

ಶಿವಶಂಕರಪ್ಪ ಅವರಿಗೆ ಡಿಸಿಎಂ ಹುದ್ದೆ ನೀಡಬೇಕು ಎಂಬ ಮಾತುಗಳು ಕೇಳಿ ಬಂದಿದ್ದವು. 

Advertisement

Udayavani is now on Telegram. Click here to join our channel and stay updated with the latest news.

Next