Advertisement

ಶಿವಬಸವ ಯೋಗಾಶ್ರಮದ ಶಂಭುಲಿಂಗಶ್ರೀ ನಿಧನ

02:46 PM Dec 21, 2022 | Team Udayavani |

ವಿಜಯಪುರ: ನಗರದ ಶಿವಬಸವ ಯೋಗಾಶ್ರಮದ ಶಂಭುಲಿಂಗ ಶ್ರೀಗಳು ಹೃದಯಾಘಾತದಿಂದ ನಿಧನರಾಗಿದ್ದಾರೆ.

Advertisement

ಮಂಗಳವಾರ ರಾತ್ರಿ ಹೃದಯಾಘಾತದಿಂದ ಲಿಂಗೈಕ್ಯರಾಗಿದ್ದಾರೆ. ಸುದ್ದಿ ತಿಳಿಯುತ್ತಲೇ ಆಶ್ರಮದ ಭಕ್ತರು ಬುಧವಾರ ಬೆಳಗ್ಗೆಯಿಂದಲೇ ಆಶ್ರಮಕ್ಕೆ ಆಗಮಿಸಿ ಶ್ರೀಗಳ ದರ್ಶನ ಪಡೆದರು.

ಶ್ರೀಗಳು ವಿಶೇಷ ಅಧ್ಯಯನ ನಡೆಸಿ, ಪ್ರವಚನಗಳ ಮೂಲಕ ಅಪಾರ ಭಕ್ತರನ್ನು ಸಂಪಾದಿಸಿದ್ದರು. ಕಳೆದ ಕೆಲ ವರ್ಷಗಳಿಂದ ಚಿಂತನ ಗೋಷ್ಠಿ, ಮಾಸಿಕ ಶಿವಾನುಭವ ಗೋಷ್ಠಿ ಗಳಂತ ಕಾರ್ಯಗಳ ಮೂಲಕ ಸಮಾಜದಲ್ಲಿ ವಿಶೇಷವಾಗಿ ಯುವ ಜನರಲ್ಲಿ ನೈತಿಕ ಜೀವನ ಮೌಲ್ಯ ಬಿತ್ತುವ ಕೆಲಸದಲ್ಲಿ ತಮ್ಮನ್ನು ಸಕ್ರಿಯಗೊಳಿಸಿಕೊಂಡಿದ್ದರು.

ನಗರದಲ್ಲಿ ಭಕ್ತರಿಗೆ ಶ್ರೀಗಳ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿತ್ತು. ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶಟ್ಟಿ, ಪಾಲಿಕೆ ಸದಸ್ಯ ಪ್ರೇಮಾನಂದ ಬಿರಾದಾರ ಸೇರಿದಂತೆ ಇತರೆ ಗಣ್ಯರು ಶ್ರೀಗಳ ಅಂತಿಮ ದರ್ಶನ ಪಡೆದರು.

ಬಳಿಕ ಶ್ರೀಗಳ ಮೂಲಸ್ಥಳವಾದ  ತಾಳಿಕೋಟೆಯ ಬಸವ ನಗರದ ಪೂಜ್ಯರ ಪೂರ್ವಾಶ್ರಮದ ಸ್ವಗೃಹದಲ್ಲಿ ಅಲ್ಲಿನ ಭಕ್ತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.

Advertisement

ಸ್ಥಳಿಯ ಭಕ್ತರ ದರ್ಶನದ ನಂತರ ಬಳಗಾನೂರ ಕ್ರಾಸ್ ಬಳಿ ಇರುವ ಶ್ರೀಗಳ ತೋಟದಲ್ಲಿ ಅಂತಿಮ ವಿದಾಯ ಸಂಸ್ಕಾರ ನೆರವೇರಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next