Advertisement

PM ಮೋದಿಗೆ ಅವಮಾನ, ರಕ್ಷಿತ್‌ ಶಿವರಾಂ ವಿರುದ್ಧ ಪ್ರಕರಣ ದಾಖಲು

12:16 AM Aug 21, 2024 | Team Udayavani |

ಬೆಳ್ತಂಗಡಿ: ದೇಶದ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್‌ ಶಿವರಾಂ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ನೀಡಲಾಯಿತು.

Advertisement

ಆ.19ರಂದು ಬೆಳ್ತಂಗಡಿ ಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರತಿಭಟನೆಯಲ್ಲಿ ಪ್ರಧಾನಿ ಯವರೇ ಒಂದು ವಿಚಾರ ವನ್ನು ತಿಳಿದುಕೊಳ್ಳಿ, ಬಾಂಗ್ಲಾ ದೇಶದಲ್ಲಿ ಹಾಸಿಗೆ ದಿಂಬು ಹಿಡ್ಕೊಂಡು ಹೋದ್ರಲ್ಲ ಆ ಪ್ರಸಂಗ ನಿಮಗೂ ಕೂಡ ಅತೀ ಶೀಘ್ರದಲ್ಲಿ ಬರಲಿದೆ ಎಚ್ಚರವಾಗಿರಿ ಎಂದು ದೇಶದಲ್ಲಿ ಅರಾಜಕತೆ ಸೃಷ್ಟಿಸುವ ರಾಷ್ಟ್ರ ವಿರೋಧಿ ಹೇಳಿಕೆಯನ್ನು ನೀಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಲಾಗಿದೆ.

ಈ ಸಂದರ್ಭ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬೆಳಾಲು ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next