Advertisement

ಯಾದಗಿರಿ ಜಿಲ್ಲಾ ಉಸ್ತುವಾರಿಯಾಗಿ ಸಚಿವ ಆರ್. ಶಂಕರ್ ನೇಮಕ

01:03 PM May 07, 2021 | Team Udayavani |

ಯಾದಗಿರಿ : ಪಶು ಸಂಗೋಪನೆ ಮತ್ತು ಯಾದಗಿರಿ ಜಿಲ್ಲಾ ಉಸ್ತುವಾರಿ ಪ್ರಭು ಚವ್ಹಾಣ ಅವರು ಗುರುವಾರ ಮತ್ತು ಶುಕ್ರವಾರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಕೋವಿಡ್ ಪರಿಸ್ಥಿತಿ ಅವಲೋಕಿಸಲು ಮುಂದಾಗಿದ್ದಾರೆ.

Advertisement

ಗುರುವಾರ ಸಂಜೆಯಷ್ಟೆ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ, ಆಮ್ಲಜನಕ ಪೂರೈಕೆ ಇತರೆ ವ್ಯವಸ್ಥೆಗಳನ್ನು ಪರಿಶೀಲಿಸಿ ದರು. ಶುಕ್ರವಾರ ಬೆಳಗ್ಗೆಯಿಂದ ವಡಗೇರಾ, ಸುರಪುರ, ಶಹಾಪೂರ ಹಾಗೂ ಗುರುಮಠಕಲ್ ತಾಲೂಕುಗಳಲ್ಲಿ ತಾಲೂಕು ಆಡಳಿತದ ಜತೆ ಸಭೆ ನಡೆಸಲು ನಿರ್ಧರಿಸಿದ್ದರು.

ಈ ಮಧ್ಯೆಯೇ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ತೋಟಗಾರಿಕೆ ಮತ್ತು ರೇಷ್ಮೆ ಸಚಿವ ಆರ್. ಶಂಕರ್ ಅವರನ್ನು ಸರ್ಕಾರ ನೇಮಿಸಿದೆ. ಸಚಿವ ಪ್ರಭು ಚವ್ಹಾಣ ನಿಗದಿಯಂತೆ ತಾಲೂಕು ಮಟ್ಟದಲ್ಲಿ ಸಭೆ ನಡೆಸುವರೋ ಇಲ್ಲ ಮೊಟಕುಗೊಳಿಸುವರೊ ಕಾದು ನೋಡಬೇಕಿದೆ.

 

 

Advertisement

 

Advertisement

Udayavani is now on Telegram. Click here to join our channel and stay updated with the latest news.

Next