Advertisement

ಶಂಕರನಾರಾಯಣ : ಪಿಯುಸಿ ಮರು ಪರೀಕ್ಷೆಯಲ್ಲೂ ಫೇಲ್ : ನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

06:31 PM Jun 30, 2022 | Team Udayavani |

ಶಂಕರನಾರಾಯಣ : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಹಿನ್ನೆಲೆಯಲ್ಲಿ ಮನನೊಂದ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಂಕರನಾರಾಯಣ ಗ್ರಾಮದ ಕುಳ್ಳಂಜೆಯಲ್ಲಿ ನಡೆದಿದೆ.

Advertisement

ಶಂಕರನಾರಾಯಣ ಸರಕಾರಿ ಕಾಲೇಜು ನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿ ಮಾನಸ ಕುಲಾಲ (17) ಆತ್ಮಹತ್ಯೆ ಮಾಡಿಕೊಂಡಿರುವಾಕೆ .

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದಳು ಬಳಿಕ ಮರು ಪರೀಕ್ಷೆ ಬರೆದಿದ್ದಳು ಆದರೆ ಮರು ಪರೀಕ್ಷೆಯಲ್ಲೂ ಅನುತ್ತೀರ್ಣಗೊಂಡಿದ್ದಳು ಇದರಿಂದ ಮನನೊಂದ ವಿದ್ಯಾರ್ಥಿನಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಶಂಕರನಾರಾಯಣ ಗ್ರಾಮದ ಕುಳ್ಳಂಜೆ ಶಾಲೆ ಬಳಿಯ ನಿವಾಸಿ ಬಾಬ್ಬಣ್ಣ ಕುಲಾಲ ಅವರಿಗೆ ಇಬ್ಬರು ಮಕ್ಕಳಿದ್ದು ಒಬ್ಬ ಪುತ್ರ ಕೆಲವು ವರ್ಷದ ಹಿಂದೆ ಬ್ರೈನ್ ಟ್ಯೂಮ್ಮರ್ ನಿಂದ ಮೃತ ಪಟ್ಟಿದ್ದಾನೆ. ಇದೀಗ ಮಗಳ ಸಾವಿನಿಂದ ಕುಟುಂಬದ ರೋಧನ ಮುಗಿಲು ಮುಟ್ಟಿದೆ.

ಇದನ್ನೂ ಓದಿ : 

Advertisement

ಬಾಬಣ್ಣ ಕುಲಾಲ ಅವರಿಗೆ ಅಪಘಾತವಾಗಿ ದುಡಿಯಲು ಕೂಡ ಆಗುತ್ತಿರಲಿಲ್ಲ. ತಾಯಿ ಅಕ್ಷರ ದಾಸೋಹ ಕೆಲಸ ಮಾಡಿ ಸಂಸಾರ ನಡೆಸುತಿದ್ದರು. ಮಾನಸ ಅವರ ವಿದ್ಯಾಭ್ಯಾಸಕ್ಕೆ ಒಬ್ಬರು ದಾನಿಗಳು ಸಹಾಯ ಮಾಡುತಿದ್ದರು. ಈ ಎಲ್ಲಾ ಹಿನ್ನಲೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಶಂಕರನಾರಾಯಣ ಪೊಲೀಸ್ ರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next