Advertisement

ಶರತ್‌ ಕೊಲೆ ಪ್ರಕರಣ: ಮತ್ತೆ ಮೂವರ ಬಂಧನ

07:05 AM Aug 17, 2017 | Harsha Rao |

ಮಂಗಳೂರು: ಆರ್‌.ಎಸ್‌.ಎಸ್‌. ಕಾರ್ಯಕರ್ತ ಶರತ್‌ ಮಡಿವಾಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬುಧವಾರ ಮತ್ತೆ ಮೂರು ಮಂದಿಯನ್ನು ಬಂಧಿಸಿದ್ದು, ಇದರೊಂದಿಗೆ ಈ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾದವರ ಸಂಖ್ಯೆ ಐದಕ್ಕೇರಿದೆ. 

Advertisement

ಬೆಳ್ತಂಗಡಿ ತಾಲೂಕು ಪಾರೆಂಕಿಯ ರಿಯಾಜ್‌, ಪುತ್ತೂರು ತಾಲೂಕು ನೆಲ್ಯಾಡಿಯ ಸಾದಿಕ್‌ ಮತ್ತು ಚಾಮರಾಜನಗರದ ಖಲೀಂ ಯಾನೆ ಖಲೀಮುಲ್ಲಾ ಬಂಧಿತ ಆರೋಪಿಗಳು. 

ಆರೋಪಿಗಳನ್ನು ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಹಾಗೂ ಹೆಚ್ಚಿನ ವಿಚಾರಣೆಗಾಗಿ ಅವರನ್ನು ವಾಪಸ್‌ ಪೊಲೀಸ್‌ ಕಸ್ಟಡಿಗೆ ಪಡೆಯಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸುಧೀರ್‌ ಕುಮಾರ್‌ ರೆಡ್ಡಿ ಅವರು ತಿಳಿಸಿದ್ದಾರೆ. 

ಆರೋಪಿಗಳಾದ ಬಂಟ್ವಾಳ ತಾಲೂಕು ಸಜಿಪ ಮುನ್ನೂರು ಗ್ರಾಮದ ಆಲಾಡಿ ಇಂದಿರಾ ನಗರದ ಅಬ್ದುಲ್‌ ಶಾಫಿ ಯಾನೆ ಶಾಫಿ ಮತ್ತು ಚಾಮರಾಜನಗರ ಗಾಳಿಪುರದ ಖಲೀಲ್‌ವುಲ್ಲಾನನ್ನು ಮಂಗಳವಾರ ಬಂಧಿಸಲಾಗಿತ್ತು. 

ಇನ್ನೊಂದೆಡೆ ಮಂಗಳವಾರ ಬಂಧಿತರಾದ ಅಬ್ದುಲ್‌ ಶಾಫಿ ಮತ್ತು ಖಲೀಲ್‌ವುಲಾÉ ಅವರು ಶರತ್‌ ಹತ್ಯೆಯ ಯೋಜನೆಯನ್ನು ರೂಪಿಸಿದ್ದು, ಕೊಲೆ ಕೃತ್ಯದ ಬಳಿಕ ಆರೋಪಿಗಳಿಗೆ ಆಶ್ರಯ ನೀಡಿದವರಾಗಿರುತ್ತಾರೆ. ಬುಧವಾರ ಬಂಧಿತರಾದ ಮೂವರು ಆರೋಪಿಗಳು ಕೂಡ ಶರತ್‌ ಕೊಲೆ ಕೃತ್ಯದಲ್ಲಿ ಭಾಗಿಯಾದ ಆರೋಪಿಗಳಿಗೆ ಆಶ್ರಯ ಮತ್ತು ಬೆಂಬಲ ನೀಡಿದ ಆರೋಪವನ್ನು ಎದುರಿಸುತ್ತಿದ್ದಾರೆ. 

Advertisement

ಇದೇ ಆರೋಪದ ಮೇಲೆ ಇಲ್ಲಿವರೆಗೆ ಒಟ್ಟು ಐವರು ಆರೋಪಿಗಳನ್ನು ಚಾಮರಾಜನಗರ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಿಂದ ಈಗಾಗಲೇ ಪೊಲೀಸರು ಬಂಧಿಸಿರುವುದು ಗಮನಾರ್ಹ. ಆದರೆ ಶರತ್‌ ಅವರನ್ನು ಮಾರಕಾಯುಧಗಳಿಂದ ಕಡಿದು ಕೊಲೆ ಕೃತ್ಯ ಎಸಗಿದ ಆರೋಪಿಗಳ ಬಂಧನ ಇನ್ನಷ್ಟೇ ಆಗಬೇಕಾಗಿದೆ. ಅಂದರೆ, ಶರತ್‌ ಅವರನ್ನು ಹತ್ಯೆ ಮಾಡಿ ಪರಾರಿಯಾಗಿರುವ ಈ ಪ್ರಕರಣದ ಪ್ರಮುಖ ಆರೋಪಿಗಳು ಯಾರು ಎಂಬುದು ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ. 

ಪಿಎಫ್‌ಐ ನಾಯಕರು
ಆರೋಪಿ ರಿಯಾಜ್‌ ಪಾರಂಕಿ ಬೆಳ್ತಂಗಡಿಯ ಪಿಎಫ್‌ಐ ನಾಯಕನಾಗಿದ್ದು, ಆರೋಪಿ ಸಾದಿಕ್‌ ಕೂಡ ಪಿಎಫ್‌ಐ ಸದಸ್ಯನಾರುತ್ತಾನೆ. ಮಂಗಳವಾರ ಚಾಮರಾಜನಗರದಲ್ಲಿ ಬಂಧನ ಕ್ಕೊಳಗಾಗಿರುವ ಖಲೀಲ್‌ವುಲ್ಲಾ ಕೂಡ ಪಿಎಫ್‌ಐ ಸಂಘಟನೆಗೆ ಸೇರಿದವನು. 

ಆದರೆ, ಈ ಕೊಲೆ ಪ್ರಕ ರಣದ ಸೂತ್ರ ಧಾರರು ಯಾರು ಮತ್ತು ಯಾವ ಕಾರಣಕ್ಕೆ ಶರತ್‌ ಮಡಿವಾಳ ಅವರನ್ನು ಕೊಲೆ ಮಾಡಲಾಗಿದೆ ಎಂಬುದು ಪೊಲೀಸರ ತನಿಖೆ ಪೂರ್ಣಗೊಂಡು ಎಲ್ಲ ಆರೋಪಿಗಳ ಬಂಧನವಾದ ಬಳಿಕವಷ್ಟೇ ಗೊತ್ತಾಗಲಿದೆ.

ಇಬ್ಬರಿಗೆ ಪೊಲೀಸ್‌ ಕಸ್ಟಡಿ 
ಮಂಗಳವಾರ ಬಂಧಿತರಾದ ಅಬ್ದುಲ್‌ ಶಾಫಿ ಮತ್ತು ಖಲೀಲ್‌ವುಲ್ಲಾನನ್ನು ಬಂಟ್ವಾಳ ನಗರ ಪೊಲೀಸರು ಬುಧವಾರ ಬಂಟ್ವಾಳ ಜೆ.ಎಂ.ಎಫ್‌.ಸಿ.ನ್ಯಾಯಾಲಯಕ್ಕೆ ಹಾಜರುಪಡಿ ಸಿದ್ದು, ಹೆಚ್ಚಿನ ವಿಚಾರಣೆಗಾಗಿ ಒಂದು ವಾರದ ಪೊಲೀಸ್‌ ಕಸ್ಟಡಿಗೆ ವಿಧಿಸಲಾಗಿದೆ. 

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಬಳಿಕ ಹೆಚ್ಚಿನ ವಿಚಾರಣೆಗಾಗಿ ಅವರನ್ನು ಮತ್ತೆ ಪೊಲೀಸ್‌ ಕಸ್ಟಡಿಗೆ ಪಡೆಯಲಾಗುವುದು ಎಂದು ಮಂಗಳವಾರ ಐಜಿಪಿ ಕೂಡ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದರು. 

ಇನ್ನುಳಿದ ಆರೋಪಿಗಳ ಶೀಘ್ರ ಬಂಧನ ಈ ಪ್ರಕರಣದಲ್ಲಿ ಭಾಗಿಯಾದ ಇನ್ನೂ 2- 3 ಮಂದಿ ಆರೋಪಿಗಳಿದ್ದು, ಅವರನ್ನು ಶೀಘ್ರ ಬಂಧಿ ಸುವ ವಿಶ್ವಾಸವನ್ನು ಪೊಲೀಸರು ವ್ಯಕ್ತ ಪಡಿಸಿದ್ದಾರೆ. 

ಶರತ್‌ ಮಡಿವಾಳ ಅವರ ಮೇಲೆ ಜು. 4 ರಂದು ರಾತ್ರಿ ಬಿ.ಸಿ.ರೋಡ್‌ನ‌ಲ್ಲಿ ಮಾರಕಾಯುಧಗಳಿಂದ ಹಲ್ಲೆ ನಡೆದಿತ್ತು. ಜು. 6/7 ರಂದು ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಸಾವನ್ನಪ್ಪಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next