Advertisement

ಪ್ರಧಾನಿಗೆ ರ್ಯಾಲಿ ಮಾಡಲು ಸಮಯವಿದೆ ರೈತರನ್ನು ಭೇಟಿ ಮಾಡಲು ಸಮಯವಿಲ್ಲ : ಶರದ್ ಪವಾರ್ ಟೀಕೆ

06:39 PM Mar 07, 2021 | Team Udayavani |

ರಾಂಚಿ :  ಪಶ್ಚಿಮ ಬಂಗಾಳ ಚುನಾವಣೆ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಕೊಲ್ಕತ್ತಾದ ಬೃಹತ್ ರ್ಯಾಲಿಯಲ್ಲಿ ಭಾಗಿಯಾಗಿ, ಬಿಜೆಪಿ ಪರ ಪ್ರಚಾರ ಮಾಡಿದ್ದಾರೆ. ಈ ಬಗ್ಗೆ ಟೀಕೆ ಮಾಡಿರುವ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್, ಮೋದಿಯವರಿಗೆ ಕೊಲ್ಕತ್ತಾಕ್ಕೆ ಹೋಗಲು ಸಮಯವಿದೆ. ಆದ್ರೆ ದೆಹಲಿಯ ಗಡಿಯಲ್ಲಿ ಪ್ರತಿಭಟನೆ ಮಾಡುತ್ತಿರುವ ರೈತರನ್ನು ಭೇಟಿಯಾಗಲು ಸಮಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ರಾಷ್ಟ್ರ ರಾಜಧಾನಿ ನವದೆಹಲಿ ಗಡಿಗಳಲ್ಲಿ ಕಳೆದ ನವೆಂಬರ್ ನಿಂದ ರೈತರು ಕೇಂದ್ರ ಸರ್ಕಾರ ತಂದಿರುವ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದಾರೆ.

ರಾಂಚಿಯಲ್ಲಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಶರದ್ ಪವಾರ್,  ಭಾತೃತ್ವ ಬೆಳೆಸುವುದು ಕೇಂದ್ರ ಸರ್ಕಾರದ ಜವಾಬ್ದಾರಿ, ಆದ್ರೆ ಬಿಜೆಪಿಯು ದೇಶದಲ್ಲಿ ಕೋಮು ವಿಷ ಪಸರಿಸುವ ಕೆಲಸ ಮಾಡುತ್ತಿದೆ ಎಂದು ಹರಿಹಾಯ್ದಿದ್ದಾರೆ.

ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಗ್ರೌಂಡ್ ನಲ್ಲಿ ಭಾನುವಾರ ಮೋದಿ ಬೃಹತ್ ರ್ಯಾಲಿ ಹಮ್ಮಿಕೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next