Advertisement

ಎನ್‌ಸಿಪಿಯ ಎಲ್ಲಾ ಘಟಕಗಳನ್ನು ವಿಸರ್ಜಿಸಿದ ಶರದ್ ಪವಾರ್

02:40 PM Jul 21, 2022 | Team Udayavani |

ಮುಂಬಯಿ : ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್ ಅವರು ತಮ್ಮ ಪಕ್ಷದ ಎಲ್ಲಾ ಇಲಾಖೆಗಳು ಮತ್ತು ಕೋಶಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಿದ್ದಾರೆ ಎಂದು ಎನ್‌ಸಿಪಿಯ ಹಿರಿಯ ನಾಯಕರೊಬ್ಬರು ಬುಧವಾರ ಹೇಳಿದ್ದಾರೆ.

Advertisement

ಎನ್‌ಸಿಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಫುಲ್ ಪಟೇಲ್ ಟ್ವೀಟ್ ಮಾಡಿದ್ದು, “ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಶರದ್ ಪವಾರ್ ಅವರ ಅನುಮೋದನೆಯೊಂದಿಗೆ, ಎಲ್ಲಾ ಇಲಾಖೆಗಳು ಮತ್ತು ಕೋಶಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜನೆ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

”ನಮ್ಮ ರಾಷ್ಟ್ರೀಯ ಅಧ್ಯಕ್ಷ ಗೌರವಾನ್ವಿತ ಶ್ರೀ ಶರದ್ ಪವಾರ್ ಸಾಹೇಬ್ ಅವರ ಅನುಮೋದನೆಯೊಂದಿಗೆ, ಎಲ್ಲಾ ರಾಷ್ಟ್ರೀಯ ಮಟ್ಟದ ಇಲಾಖೆಗಳು ಮತ್ತು ಕೋಶಗಳು, ನ್ಯಾಷನಲಿಸ್ಟ್ ಮಹಿಳಾ ಕಾಂಗ್ರೆಸ್, ನ್ಯಾಷನಲಿಸ್ಟ್ ಯೂತ್ ಕಾಂಗ್ರೆಸ್ ಮತ್ತು ನ್ಯಾಷನಲಿಸ್ಟ್ ಸ್ಟೂಡೆಂಟ್ಸ್ ಕಾಂಗ್ರೆಸ್ ಅನ್ನು ಹೊರತುಪಡಿಸಿ ತಕ್ಷಣವೇ ಜಾರಿಗೆ ಬರುವಂತೆ ವಿಸರ್ಜನೆಯಾಗಿದೆ” ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಶಿವಸೇನೆಯಲ್ಲಿ ಮಹಾ ಬಂಡಾಯವಾಗಿ ಮಹಾ ವಿಕಾಸ್ ಅಘಾಡಿ ಸರಕಾರ ಪತನದ ಬೆನ್ನಲ್ಲೇ ಪವಾರ್ ಪಕ್ಷದಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next