Advertisement

ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಶರದ್ ಪವಾರ್: ಎನ್‌ಸಿಪಿ ಅಧ್ಯಕ್ಷರಾಗಿ ಮುಂದುವರಿಕೆ

06:47 PM May 05, 2023 | Team Udayavani |

ಮುಂಬಯಿ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಶರದ್ ಪವಾರ್ ತಮ್ಮ ನಿಲುವನ್ನು ವಾಪಸ್ ಪಡೆದಿದ್ದಾರೆ.

Advertisement

ಶುಕ್ರವಾರ ಮಹಾರಾಷ್ಟ್ರದಲ್ಲಿ ಪಕ್ಷದ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಅವರ ರಾಜೀನಾಮೆಯನ್ನು ಸಮಿತಿಯು ತಿರಸ್ಕರಿಸಿದ ಕೆಲವೇ ಗಂಟೆಗಳ ಬಳಿಕ ಈ ಪ್ರಕಟಣೆ ಹೊರಬಿದ್ದಿದೆ.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶರದ್ ಪವಾರ್, “ನನ್ನ ರಾಜೀನಾಮೆ ನಿರ್ಧಾರ ಪ್ರಕಟಿಸಿದ ನಂತರ ಕಾರ್ಮಿಕರು ಮತ್ತು ಜನರಲ್ಲಿ ಅಶಾಂತಿ ಉಂಟಾಗಿದೆ. ನನ್ನ ಸಲಹೆಗಾರರು ನಾನು ಈ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಹೇಳಿದರು, ಅಲ್ಲದೆ ನನ್ನ ಬೆಂಬಲಿಗರು, ಮಹಾರಾಷ್ಟ್ರ ಮತ್ತು ಭಾರತದಾದ್ಯಂತದ ಇದ್ದು ನನ್ನ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಮನವಿ ಮಾಡಿದರು.” ನನ್ನ ಬೆಂಬಲಿಗರ ಒತ್ತಾಯದ ಮೇರೆಗೆ ರಾಜೀನಾಮೆ ನಿರ್ಧಾರವನ್ನು ಹಿಂಪಡೆದಿರುವುದಾಗಿ, ಪಕ್ಷದ ಅಧ್ಯಕ್ಷರಾಗಿ ಮುಂದುವರೆಯುವುದಾಗಿ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Mangaluru: ಗಡಿಪಾರಾಗಿದ್ದ ರೌಡಿಶೀಟರ್ ಕೋಡಿಕೆರೆ ಲೋಕೇಶ್ ಬಂಧನ

 

Advertisement
Advertisement

Udayavani is now on Telegram. Click here to join our channel and stay updated with the latest news.

Next