Advertisement

ಜೀವನಪರ್ಯಂತ ಶರದ್‌ BJP ಸೇರಲ್ಲ!

12:26 AM Aug 17, 2023 | Team Udayavani |

ಮುಂಬಯಿ: ನ್ಯಾಶನಲಿಸ್ಟ್‌ ಕಾಂಗ್ರೆಸ್‌ ಪಾರ್ಟಿ (ಎನ್‌ಸಿಪಿ) ಮುಖ್ಯಸ್ಥ ಶರದ್‌ ಪವಾರ್‌ ತಮ್ಮ ಪಕ್ಷದ ಮರುಜೋಡಣೆಗೆ ಶ್ರಮಿಸುತ್ತಿದ್ದಾರೆ. ಅವರು ಜೀವನಪರ್ಯಂತ ಬಿಜೆಪಿಗೆ ಸೇರು ವುದಿಲ್ಲವೆಂದು ಶಿವಸೇನೆ ಉದ್ಧವ್‌ ಬಣದ ನಾಯಕ, ಸಂಜಯ್‌ ರಾವತ್‌ ಹೇಳಿದ್ದಾರೆ. ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಂಡಿರುವ ಅಜಿತ್‌ ಪವಾರ್‌ ಇತ್ತೀಚೆಗಷ್ಟೇ ಶರದ್‌ ಅವರೊಟ್ಟಿಗೆ ಗೌಪ್ಯ ಮಾತುಕತೆ ನಡೆಸಿದ್ದ ವಿಚಾರ ಹಲವು ಸಂಶಯಗಳನ್ನು ಹುಟ್ಟು ಹಾಕಿದ್ದ ನಡುವೆಯೇ ಸಂಜಯ್‌ ಅವರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.

Advertisement

ಶರದ್‌ ಅವರಿಗೆ ಅಜಿತ್‌ ಅವರು ಕೇಂದ್ರದಲ್ಲಿ ಸ್ಥಾನ ದೊರಕಿಸಿಕೊಡುವ ಆಫ‌ರ್‌ ನೀಡಿ, ಬಿಜೆಪಿ ಸೇರ್ಪಡೆಗೊಳ್ಳು ವಂತೆ ಕೋರಿದ್ದಾರೆ ಎನ್ನುವ ಮಾತು ಕೇಳಿಬಂದಿದೆ. ಈ ಬಗ್ಗೆ ನಿಮ್ಮ ಅಭಿಪ್ರಾಯ ಏನು ಎಂದು ಮಾಧ್ಯಮಗಳು ಸಂಜಯ್‌ ಅವರನ್ನು ಪ್ರಶ್ನಿಸಿದಾಗ ಅವರು ಮೇಲಿನಂತೆ ಪ್ರತಿಕ್ರಿಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next