Advertisement
ಯಾರು ಈ ಶರಣಬಸವೇಶ್ವರರು ಅನ್ನೋದಕ್ಕೆ ರೋಚಕ ಇತಿಹಾಸವೇ ಇದೆ. ಶ್ರೀ ಶರಣಬಸವೇಶ್ವರರು ಕ್ರಿ.ಶ 1746ರಲ್ಲಿ ಕಲಬುರಗಿಯ ಜೇವರ್ಗಿ ತಾಲೂಕಿನ ಅರಳಗುಂಡಗಿ ಗ್ರಾಮದಲ್ಲಿ ಜನಿಸಿದರು. ಶರಣಬಸವೇಶ್ವರರು ಕಲಿಕೆಯ ದಿನಗಳಲ್ಲಿ ಅಧ್ಯಾತ್ಮದ ಕಡೆಗೆ ಹೆಚ್ಚಿನ ಒಲವು ತೋರಿದರು. ಇವರು ಚಿಕ್ಕವಯಸ್ಸಿನಲ್ಲಿಯೇ ವಿಭೂತಿ, ರುದ್ರಾಕ್ಷಿ$, ಲಿಂಗ, ಗುರು, ಜಂಗಮ, ದಾಸೋಹ ಹಾಗೂ ಕಾಯಕ… ಈ ಎಲ್ಲದರಹಿರಿಮೆಯನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಂಡಿದ್ದರು. ಕಾಯಕ ದಾಸೋಹ , ಲಿಂಗಾಯತ ತತ್ವಗಳ ಬೋಧನೆ ಮಾಡುತ್ತಾ ಜಿಲ್ಲೆಯಾದ್ಯಂತ ಸಂಚರಿಸಿದರು.
Related Articles
Advertisement
ಅವರು ದಾರಿಯುದ್ದಕ್ಕೂ ಹಲವಾರು ಪವಾಡಗಳನ್ನು ಮಾಡಿ, ದಾಸೋಹವನ್ನು ನಡೆಸಿದರು. ಔರಾದ್ನ ದಂಡರಾಯರು ಕೂಡ ಇವರ ದಾಸೋಹಕ್ಕೆ ಕೈ ಜೋಡಿಸಿದರು. ಒಂದು ದಿನ ಹೈದ್ರಾಬಾದಿನ ರಾಜನು ತನ್ನ ಸೇನಾನಿಗಳೊಂದಿಗೆ ಕಂದಾಯ ಕರವನ್ನು ಕೇಳಲು ಬಂದರು. ಆಗ ಶರಣರ ದಾಸೋಹವನ್ನು ಕಂಡು ಬೆರಗಾಗಿ ಪಾದಗಳಿಗೆ ನಮಿಸಿ ಬರಿಗೈಯಲ್ಲಿ ಹೊರಟು ಹೋದರಂತೆ. ಈ ಕಾಯಕದಿಂದ ಶರಣರ ಹೆಸರು ಎಲ್ಲಡೆ ಹರಡಿತು. ಇದನ್ನು ಗಮನಿಸಿದ ಕಲುºರ್ಗಿಯ ದೊಡ್ಡಪ್ಪಗೌಡರು ಶರಣಬಸವೇಶ್ವರರನ್ನು ಕಲಬುರಗಿಗೆ ಆಹ್ವಾನಿಸಿ, ದಾಸೋಹ ನಡೆಸಲು ಮತ್ತು ಅವರು ನೆಲೆಸಲು ಜಾಗವನ್ನು ನೀಡಿದರು. ಅನ್ನ, ಜ್ಞಾನ ದಾಸೋಹ ಮಾಡುತ್ತಲೇ ಬೆಳಕಾದ ಶರಣಬಸವೇಶ್ವರರು 1824ರಲ್ಲಿ ಅನಾರೋಗ್ಯದಿಂದಾಗಿ ಲಿಂಗೈಕ್ಯರಾದರು. ನಂತರ ಅಲ್ಲಿ ಸಮಾಧಿ ನಿರ್ಮಾಣವಾಯಿತು. ಗೋಪುರ ಬಂತು. ಅದುವೇ ಇಂದು ಪವಿತ್ರವಾದ ಶ್ರೀ ಶರಣಬಸವೇಶ್ವರ ದೇವಸ್ಥಾನವಾಗಿದೆ. ಪ್ರತಿ ನಿತ್ಯ ಬೆಳಗ್ಗೆ, ಸಂಜೆ ಪೂಜೆ, ವರ್ಷದ 365 ದಿನಗಳೂ ಅನ್ನದಾಸೋಹ ನಡೆಯುತ್ತಿರುತ್ತದೆ. ಹೋಳಿ ಹುಣ್ಣಿಮೆ ಮುಗಿದ ಐದನೇ ದಿನಕ್ಕೆ (ಈ ಸಲ ಮಾರ್ಚ್ 25) ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಭವ್ಯ ರಥೋತ್ಸವ ಜರಗುತ್ತದೆ. ಮಲ್ಲಿಕಾರ್ಜುನ ಮೇತ್ರಿ, ಹಿಂಚಗೇರಾ