Advertisement

ಬಸವಕಲ್ಯಾಣದಲ್ಲಿ ಗೆಲುವಿನ ನಗಾರಿ ಬಾರಿಸಿದ ಬಿಜೆಪಿಯ ಶರಣು ಸಲಗರ

01:20 PM May 02, 2021 | Team Udayavani |

ಬೀದರ್: ಬಸವ ಕಲ್ಯಾಣ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿಯ ಪಕ್ಷದ ಅಭ್ಯರ್ಥಿ ಶರಣು ಸಲಗರ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಸಲಗಾರ್ ಅವರು ಕಾಂಗ್ರೆಸ್ ಅಭ್ಯರ್ಥಿ ವಿರುದ್ದ 20,448 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

Advertisement

ಅಂತಿಮ  ಸುತ್ತಿನ ಎಣಿಕಯ ಬಳಿಕ ಶರಣು ಸಲಗಾರ್ 70556 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮಾಲ ನಾರಾಯಣ ರಾವ್ ಅವರು 50108 ಮತಗಳನ್ನಷ್ಟೇ ಪಡೆದಿದ್ದಾರೆ. ಜೆಡಿಎಸ್ ನಿಂದ ಕಣಕ್ಕಿಳಿಸಿದ್ದ ಸಯ್ಯದ್ ಖಾದ್ರಿ ಅವರು 11390 ಮತಗಳನ್ನಷ್ಟೇ ಪಡೆದಿದ್ದಾರೆ.

ಇದನ್ನೂ ಓದಿ:ಮಸ್ಕಿಯಲ್ಲಿ ‘ಪ್ರತಾಪ’ ತೋರಿದ ತುರುವಿನಹಾಳ: ಕಮಲ ಪಕ್ಷದ ಆಪರೇಶನ್ ಗೆ ಹಿನ್ನಡೆ?

ಬಿಜೆಪಿಗೆ ಸೆಡ್ಡು ಹೊಡೆದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾಗೆ ಕೇವಲ 9390 ಮತಗಳು ಲಭಿಸಿವೆ. ಖೂಬಾ ಸ್ಪರ್ಧೆಯಿಂದ ಶರಣು ಸಲಗಾರಗೆ ಹಿನ್ನಡೆಯಾಗಬಹುದು ಎಂಬ ಲೆಕ್ಕಾಚಾರ ತಲೆಗೆಳಗಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next