Advertisement

ಶರಣು ಸಲಗರ ಗೆಲುವು ನಿಶ್ಚಿತ : ಚವ್ಹಾಣ

08:44 PM Mar 29, 2021 | Team Udayavani |

ಬೀದರ: ಬಿಜೆಪಿಯಿಂದ ಜಿಲ್ಲೆಯಲ್ಲಿ ನಾನೊಬ್ಬನೇ ಶಾಸಕನಿದ್ದೇನೆ. ಮುಂದೆ ಶರಣು ಸಲಗರ ಅವರು ಗೆದ್ದು, ನನ್ನ ಜತೆ ವಿಧಾನಸೌಧಕ್ಕೆ ಬರುವುದು ನಿಶ್ಚಿತ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಭವಿಷ್ಯ ನುಡಿದಿದ್ದಾರೆ.

Advertisement

ಈ ಕುರಿತು ಪ್ರಕಟಣೆ ನೀಡಿರುವ ಅವರು, ಉಪ ಚುನಾವಣೆಯಲ್ಲಿ ಶರಣು ಸಲಗರ ಅವರನ್ನು ಗೆದ್ದೇ ಗೆಲ್ಲಿಸುತ್ತೇವೆ ಎಂಬ ವಿಶ್ವಾಸವನ್ನು ಪಕ್ಷದ ಪ್ರಮುಖರು ಹಾಗೂ ಸಿಎಂಗೆ ನೀಡಿದ್ದೇನೆ. ಡಿಸಿಎಂ ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಚಿವ ವಿ.ಸೋಮಣ್ಣ, ಸಂಸದ ಭಗವಂತ ಖೂಬಾ, ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ಮಾಜಿ ಶಾಸಕ ಅಮರನಾಥ ಪಾಟೀಲ, ವಿಭಾಗ ಸಹ ಪ್ರಭಾರಿ ಈಶ್ವರಸಿಂಗ್‌ ಠಾಕೂರ್‌, ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳಕರ್‌ ಅವರು ಉತ್ತಮ ಅನುಭವ ಹೊಂದಿದ್ದಾರೆ.

ಇವರೆಲ್ಲರ ಸಹಕಾರದಿಂದ ಕಲ್ಯಾಣದಲ್ಲಿ ಕಮಲ ಅರಳುವುದು ಖಚಿತ ಎಂದು ಹೇಳಿದ್ದಾರೆ. ಪಕ್ಷದ ನಿರ್ಣಯ ಗೌರವಿಸಿ: ಟಿಕೆಟ್‌ ವಂಚಿತ ನಾಯಕರು ನಿರಾಶರಾಗಬಾರದು. ಭಿನ್ನಾಭಿಪ್ರಾಯಗಳನ್ನೆಲ್ಲಾ ಮರೆತು ಪಕ್ಷದ ನಿರ್ಣಯಕ್ಕೆ ಗೌರವ ಕೊಡಬೇಕು. ಪಕ್ಷದ ವರಿಷ್ಠರು ಆಯ್ಕೆ ಮಾಡಿರುವ ಅಭ್ಯರ್ಥಿಯನ್ನು ಗೆಲ್ಲಿಸಲು ಕಾರ್ಯಕರ್ತರು ಸಿದ್ಧರಿದ್ದಾರೆ. ಟಿಕೆಟ್‌ ಆಕಾಂಕ್ಷಿಗಳು ಸಹ ಇದೇ ರೀತಿ ಕೆಲಸ ಮಾಡಬೇಕು.

ಜಿಲ್ಲಾ ಉಸ್ತುವಾರಿ ಸಚಿವರಿಗೆ ಚುನಾವಣೆಯ ಉಸ್ತುವಾರಿ ವಹಿಸಲಾಗಿದೆ. ಅದರಂತೆ ಸಂಸದ ಭಗವಂತ ಖೂಬಾ ಹಾಗೂ ಎಲ್ಲಾ ಮುಖಂಡರು ಮತ್ತು ಕಾರ್ಯಕರ್ತರ ಜತೆಗೂಡಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಶಕ್ತಿ ಮೀರಿ ಪ್ರಯತ್ನಿಸುತ್ತೇನೆ ಎಂದು ಹೇಳಿದ್ದಾರೆ. ಕೇಂದ್ರದಲ್ಲಿ ನರೇಂದ್ರ ಮೋದಿ ಹಾಗೂ ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಸರ್ಕಾರಗಳು ಅನೇಕ ಜನಪರ ಕೆಲಸಗಳನ್ನು ಮಾಡುತ್ತಿವೆ.

ಬರುವ ದಿನಗಳಲ್ಲಿ ಬಸವಕಲ್ಯಾಣದಲ್ಲಿ ಅಭಿವೃದ್ಧಿ ಕೆಲಸಗಳು ಚುರುಕಾಗಿ ನಡೆಯಲಿವೆ ಎಂದು ತಿಳಿಸಿರುವ ಸಚಿವರು, ಸಲಗರ ಅವರು ಕೊರೊನಾ ಸಂದರ್ಭದಲ್ಲಿ ಎಲ್ಲಾ ಹಳ್ಳಿಗಳಿಗೆ ಭೇಟಿ ನೀಡಿ, ಕಷ್ಟದಲ್ಲಿದ್ದ ಜನರಿಗೆ ಸಹಾಯ ಮಾಡಿದ್ದಾರೆ. ಕಲ್ಯಾಣದ ಜನತೆ ಅಭಿವೃದ್ಧಿ ಪರ ಚಿಂತನೆ ಹೊಂದಿರುವ ಶರಣು ಸಲಗರ ಅವರ ಕೈ ಹಿಡಿಯಲಿದ್ದಾರೆ. ಅಂದಾಜು 25,000 ಮತಗಳ ಅಂತರದಿಂದ ಗೆಲುವು ಸಾಧಿ ಸಲಿದ್ದಾರೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next