Advertisement

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭೇಟಿ ಮಾಡಿದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ

12:27 PM Feb 24, 2021 | keerthan |

ಬೆಂಗಳೂರು: ಹೊಸಕೋಟೆ ವಿಧಾನಸಭೆ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ಸಮಾಲೋಚನೆ ನಡೆಸಿದರು.

Advertisement

ಸದಾಶಿವ ನಗರದಲ್ಲಿರವ ಡಿ ಕೆ ಶಿವಕುಮಾರ್ ಅವರ ನಿವಾಸದಲ್ಲಿ ಬುಧವಾರ ಬೆಳಗ್ಗೆ ಶರತ್ ಬಚ್ಚೇಗೌಡ ಮಾತುಕತೆ ನಡೆಸಿದರು.

ಶರತ್ ಬಚ್ಚೇಗೌಡ ಅವರು ಕಾಂಗ್ರೆಸ್ ಸೇರುವುದು ಇದೀಗ ಅಧಿಕೃತವಾಗಿದೆ. ಗುರುವಾರ ( ಫೆ.25) ಅವರು ಕೆಪಿಸಿಸಿ ಕಚೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

ಇದನ್ನೂ ಓದಿ:ಕುಮಾರಸ್ವಾಮಿ ವಿರುದ್ಧ ಸುಳ್ಳು ಆರೋಪ: ರಾಜಶೇಖರ್‌

ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಪಕ್ಷತ ಇತರೆ ಮುಖಂಡರ ಸಮ್ಮುಖದಲ್ಲಿ ಗುರುವಾರ ಶರತ್ ಕೈ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

Advertisement

ಶರತ್ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೊಸಕೋಟೆ ಕ್ಷೇತ್ರದಿಂದ ಎಂಟಿಬಿ ನಾಗರಾಜ್ ವಿರುದ್ಧ ಬಿಜೆಪಿಯಿಂದ ಟಿಕೆಟ್ ಪಡೆದು ಸ್ಪರ್ಧಿಸಿ ಸೋತಿದ್ದರು. ಆದರೆ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಹೊಸಕೋಟೆ ಕ್ಷೇತ್ರಕ್ಕೆ ಬಡೆದ ಉಪಚುನಾವಣೆ ಸಂದರ್ಭದಲ್ಲಿ ಬಿಜೆಪಿ ಶರತ್ ಬಚ್ಚೇಗೌಡ ಬದಲಿಗೆ ಎಂಟಿಬಿ ನಾಗರಾಜ್ ಗೆ ಟಿಕೆಟ್ ನೀಡಿತ್ತು. ಈ ಸಂದರ್ಭದಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿದ್ದ ಶರತ್ ಜಯ ಗಳಿಸಿದ್ದರು.

ಇದನ್ನೂ ಓದಿ: ಹಲವು ದಾಖಲೆಗಳ ಸರದಾರ ಮೊಟೆರಾದ ಸರ್ದಾರ್ ಪಟೇಲ್ ಕ್ರೀಡಾಂಗಣ

Advertisement

Udayavani is now on Telegram. Click here to join our channel and stay updated with the latest news.

Next