Advertisement

ಬೆಂಗಳೂರಿಗೆ ಶರಾವತಿ ನೀರು ಹರಿಸೋದು ಹುಚ್ಚು ಕಲ್ಪನೆ

11:14 PM Jun 30, 2019 | Team Udayavani |

ಸಾಗರ: “ಲಿಂಗನಮಕ್ಕಿ ಜಲಾಶಯದಿಂದ ಬೆಂಗಳೂರಿಗೆ ನೀರು ಹರಿಸುವ ಯೋಜನೆ ಸರಿಯಲ್ಲ. ಇದನ್ನು ಸರಕಾರ ಕೈಬಿಡಬೇಕು’ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಒತ್ತಾಯಿಸಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿ, “ಈ ಯೋಜನೆಯನ್ನು ರಾಜ್ಯ ಸರ್ಕಾರ ಕೈ ಬಿಡಬೇಕು. ಇಂತಹ ಯೋಜನೆ ಕೈಗೆತ್ತಿಕೊಳ್ಳುವುದರಿಂದ ಸ್ಥಳೀಯ ಜನರು ರೊಚ್ಚಿಗೇಳುವ ಸಾಧ್ಯತೆ ಇರುತ್ತದೆ’ ಎಂದು ಎಚ್ಚರಿಸಿದ್ದಾರೆ.

ಲಿಂಗನಮಕ್ಕಿ ಜಲಾಶಯದಿಂದ ಬೆಂಗಳೂರಿಗೆ ನೀರು ಹರಿಸುತ್ತೇನೆ ಎನ್ನುವುದು ಹುಚ್ಚುತನದ ಕಲ್ಪನೆ. ಲಿಂಗನಮಕ್ಕಿ ಜಲಾಶಯವನ್ನು ವಿದ್ಯುತ್‌ ಉತ್ಪಾದನೆ ಉದ್ದೇಶದಿಂದ ನಿರ್ಮಾಣ ಮಾಡಲಾಗಿದೆ.

ಈಗಾಗಲೇ ಜಲಾಶಯದಲ್ಲಿ ನೀರಿನ ಕೊರತೆ ಇರುವುದರಿಂದ ವಿದ್ಯುತ್‌ ಉತ್ಪಾದನೆಗೂ ತೊಂದರೆಯಾಗುತ್ತಿದೆ. ಪ್ರಸ್ತಾವಿತ ಯೋಜನೆಯನ್ನು ಕೈ ಬಿಡುವಂತೆ ಒತ್ತಾಯಿಸಿ ಜು. 10ರಂದು ಶರಾವತಿ ನದಿ ಉಳಿಸಿ ಹೋರಾಟ ಒಕ್ಕೂಟ ಕರೆ ಕೊಟ್ಟಿರುವ ಶಿವಮೊಗ್ಗ ಜಿಲ್ಲಾ ಬಂದ್‌ಗೆ ನನ್ನ ಸಂಪೂರ್ಣ ಬೆಂಬಲವಿದೆ.

ಯೋಜನೆ ಕೈ ಬಿಡುವಂತೆ ಉಪ ಮುಖ್ಯಮಂತ್ರಿ ಡಾ| ಜಿ. ಪರಮೇಶ್ವರ್‌ ಅವರನ್ನು ಭೇಟಿಯಾಗಿ ಮನವರಿಕೆ ಮಾಡಿಕೊಡುವ ಪ್ರಯತ್ನ ನಡೆಸಲಾಗುತ್ತದೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next