Advertisement

ವರಮಹಾಲಕ್ಷ್ಮೀ ಹಬ್ಬಕ್ಕೆ ಶಾರ್ದೂಲ ಬಿಡುಗಡೆ

01:43 PM Aug 14, 2021 | Team Udayavani |

“ಶಾರ್ದೂಲ’ ಎಂಬ ಸಿನಿಮಾದ ಬಗ್ಗೆ ನೀವು ಕೇಳಿರಬಹುದು. ಈಗ ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು. ಚಿತ್ರ ವರಮಹಾಲಕ್ಷ್ಮೀ ಹಬ್ಬಕ್ಕೆ ಬಿಡುಗಡೆಯಾಗಲಿದೆ.

Advertisement

ಚಿತ್ರದ ಬಗ್ಗೆ ಮಾತನಾಡುವ ನಾಯಕ ಚೇತನ್‌ ಚಂದ್ರ, “ಇದೊಂದು ಉತ್ತಮ ಕಥಾ ಹಂದರ ಹೊಂದಿರುವ ಚಿತ್ರ. ಅಭಿನಯಿಸಿರುವ ಎಲ್ಲಾ ಕಲಾವಿದರ ಅಭಿನಯ ಚೆನ್ನಾಗಿದೆ. ಕೋವಿಡ್‌ ಸಮಯದಲ್ಲಿ ಜನರಿಗೆ ಉತ್ತಮ ಮನರಂಜನೆ ನೀಡಲು ಆ.20ರಂದು ಶಾರ್ದೂಲ ಆಗಮಿಸುತ್ತಿದೆ’ ಎಂದರು.

ಚಿತ್ರದಲ್ಲಿ ನಾಯಕಿಯಾಗಿ ನಟಿಸಿರುವ ಕೃತಿಕಾ ರವೀಂದ್ರ, “ತುಂಬಾ ಹೆದರಿಕೆಯುಳ್ಳ ಹುಡುಗಿಯಾಗಿ ನಾನು ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ದೀಕ್ಷ ಎನ್ನುವುದು ನನ್ನ ಪಾತ್ರದ ಹೆಸರು’ ಎಂದು ತಮ್ಮ ಪಾತ್ರ ಪರಿಚಯ ಮಾಡಿಕೊಂಡರು.

ಪ್ರಮುಖ ಪಾತ್ರದಲ್ಲಿಕಾಣಿಸಿಕೊಡಿರುವ ರಾಬರ್ಟ್‌ ಖ್ಯಾತಿಯ ಐಶ್ವರ್ಯ ಪ್ರಸಾದ್‌, ಆ ಚಿತ್ರದ ಪಾತ್ರಕ್ಕೂ, ಈ ಚಿತ್ರದ ಪಾತ್ರಕ್ಕೂ ತುಂಬಾ ವ್ಯತ್ಯಾಸವಿದೆ. ಕೃತಿಕಾ ಅವರದು ಹೆದರಿಕೊಳ್ಳುವ ಪಾತ್ರವಾದರೆ, ನನ್ನದು ಬೋಲ್ಡ್ ಹುಡುಗಿ ಪಾತ್ರವೆಂದರು. ಮತ್ತೂಬ್ಬ ಪ್ರಮುಖ ಪಾತ್ರಧಾರಿ ರವಿತೇಜ ತಮ್ಮ ಪಾತ್ರ ಪರಿಚಯ ಮಾಡಿಕೊಳುತ್ತಾ, ಚಿತ್ರೀಕರಣದಲ್ಲಿ ನಡೆದಕೆಲವು ಸ್ವಾರಸ್ಯಕರ ಘಟನೆಗಳನ್ನು ಹಂಚಿಕೊಂಡರು.

ಇದನ್ನೂ ಓದಿ:‘ಶೋಕಿವಾಲ’ ಹಾಡುಗಳ ರೆಕಾರ್ಡಿಂಗ್‌ ಪೂರ್ಣ

Advertisement

“ಸುಮಾರು ಐವತ್ತಕ್ಕೂ ಹೆಚ್ಚು ಚಿತ್ರ ಮಂದಿರಗಳಲ್ಲಿ ನಮ್ಮ ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದೇವೆ. ಇಂತಹ ಸಮಯದಲ್ಲಿ ಪ್ರೇಕ್ಷಕರೆ ನಮ್ಮಕೈ ಹಿಡಿಯಬೇಕು. ಕೊರೋನ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ಬಿಡುಗಡೆ ಮಾಡುತ್ತಿದ್ದೇವೆ. ಯಾವುದೇ ಭಯವಿಲ್ಲದೇ ಚಿತ್ರಮಂದಿರಕ್ಕೆ ಬಂದು ನಮ್ಮ ಚಿತ್ರವನ್ನು ನೋಡಿ ಗೆಲ್ಲಿಸಿ’ ಎಂದು ನಿರ್ಮಾಪಕರಾದ ರೋಹಿತ್‌ ಹಾಗೂ ಕಲ್ಯಾಣ್‌ ಕೇಳಿಕೊಂಡರು.

ಈ ಚಿತ್ರವನ್ನು ಅರವಿಂದ್‌ ಕೌಶಿಕ್‌ ನಿರ್ದೇಶಿಸಿದ್ದಾರೆ. ವೈ.ಜಿ.ಆರ್‌. ಮನು ಛಾಯಾಗ್ರಹಣ, ಸತೀಶ್‌ ಬಾಬು ಸಂಗೀತ‌ ನಿರ್ದೇಶನ, ಶಿವರಾಜ್‌ ಮೇಹು ‌ಸಂಕಲನ ಹಾಗೂ ಮಾಸ್‌ ಮಾದ, ವೈಲೆಂಟ್‌ ವೇಲು ಮತ್ತು ಅಲ್ಟಿಮೇಟ್‌ ಶಿವು ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಚಿತ್ರದಲ್ಲಿ ಚೇತ‌ನ್‌ ಚಂದ್ರ, ನಿರ್ದೇಶಕ, ನಟ ರವಿತೇಜ, ಕೃತಿಕ ರವೀಂದ್ರ, ಐಶ್ವರ್ಯ ಪ್ರಸಾದ್‌, ಕಲ್ಯಾಣ್‌, ಹೃಷಿಕೇಶ್‌, ಮಹೇಶ್‌ ಮುಂತಾದವರು ಈ ಚಿತ್ರದ ತಾರಾಬಳ‌ಗದಲ್ಲಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next