Advertisement

ಮಂಗಳೂರು ಕುಕ್ಕರ್ ಸ್ಫೋಟ ಆರೋಪಿ ಶಾರಿಕ್ ಬೆಂಗಳೂರಿಗೆ ಶಿಫ್ಟ್

11:50 AM Dec 17, 2022 | Team Udayavani |

ಮಂಗಳೂರು: ನಗರದ ಕಂಕನಾಡಿಯಲ್ಲಿ ನಡೆದಿದ್ದ ಕುಕ್ಕರ್ ಸ್ಫೋಟದ ಆರೋಪಿ, ಶಂಕಿತ ಉಗ್ರ ಶಾರಿಕ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ.

Advertisement

ಆಸ್ಪತ್ರೆಯ ವೈದ್ಯರು ಮತ್ತು ಅಧಿಕಾರಿಗಳ ಶಿಫಾರಸಿನ ಮೇರೆಗೆ ಶಾರಿಕ್ ಅವರನ್ನು ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ.

ಇಂದು ಬೆಳಗ್ಗೆ ಶಾರಿಕ್ ನನ್ನು ಬೆಂಗಳೂರಿಗೆ ಕಳುಹಿಸಲಾಗಿದೆ ಎಂದು ಮಂಗಳೂರು ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಆತನಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದೆ.

ಇದನ್ನೂ ಓದಿ:ಬಿಲಾವ್‌ ಭುಟ್ಟೋ ಹೇಳಿಕೆಯಿಂದ ಪಾಕ್ ಕೀಳು ಮನಸ್ಥಿತಿ ಬಯಲಾಗಿದೆ: ಯಡಿಯೂರಪ್ಪ

ನವೆಂಬರ್ 19ರಂದು ಮಂಗಳೂರಿನ ಕಂಕನಾಡಿ ಬಳಿಯ ನಾಗುರಿ ಎಂಬಲ್ಲಿ ಆಟೋ ರಿಕ್ಷಾದಲ್ಲಿ ಸ್ಫೋಟವಾಗಿತ್ತು. ಈ ಸ್ಪೋಟದಲ್ಲಿ ಶಾರಿಕ್ ಗಾಯಗೊಂಡಿದ್ದ. ಉಗ್ರ ಗೋಡೆ ಬರಹ ಪ್ರಕರಣದ ಆರೋಪಿಯಾಗಿದ್ದ ಶಾರಿಕ್ ಗೆ ಉಗ್ರ ನಂಟಿರುವ ಬಗ್ಗೆ ಪೊಲೀಸರು ತನಿಖೆಯಿಂದ ಖಚಿತ ಪಡಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next