Advertisement

ಕಾಂಗ್ರೆಸ್‌ ಸಂಸದ ಶಶಿ ತರೂರ್‌ಗೆ ಎಚ್ಚರಿಕೆ!

12:23 AM Mar 22, 2022 | Team Udayavani |

ಹೊಸದಿಲ್ಲಿ: ಮುಂದಿನ ತಿಂಗಳ 6ರಿಂದ 10ರ ವರೆಗೆ ತಿರುವನಂತಪುರದಲ್ಲಿ ನಡೆಯಲಿರುವ ಸಿಪಿಎಂ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣದಲ್ಲಿ ಭಾಗವಹಿಸದಿರುವಂತೆ ಕೇರಳ ಕಾಂಗ್ರೆಸ್‌ ಸಂಸದ ಶಶಿ ತರೂರ್‌, ಕೇರಳದ ಹಿರಿಯ ಕಾಂಗ್ರೆಸಿಗ ಕೆ.ವಿ. ಥಾಮಸ್‌ ಹಾಗೂ ಕಾಂಗ್ರೆಸ್‌ನ ಮತ್ತೊಬ್ಬ ಹಿರಿಯ ನಾಯಕ ಮಣಿಶಂಕರ್‌ ಅಯ್ಯರ್‌ ಅವರಿಗೆ ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಎಚ್ಚರಿಕೆ ನೀಡಿದ್ದಾರೆ.

Advertisement

ಸಿಪಿಎಂ ಸಭೆಯಲ್ಲಿ ಭಾಗವಹಿಸಲು ಈ ಇಬ್ಬರೂ ನಾಯಕರಿಗೆ ಆಹ್ವಾನ ಬಂದಿರುವ ಹಿನ್ನೆಲೆಯಲ್ಲಿ ಎಚ್ಚರಿಕೆ ನೀಡಲಾಗಿದೆ.

ಮೈತ್ರಿ ಬಗ್ಗೆ ಖರ್ಗೆ ಸ್ಪಷ್ಟನೆ
ಹೊಸದಿಲ್ಲಿ: ಹೈದರಾಬಾದ್‌ ಸಂಸದ ಅಸಾದುದ್ದೀನ್‌ ಓವೈಸಿ ನೇತೃತ್ವದ ಆಲ್‌ ಇಂಡಿಯಾ ಇತ್ತೆಹಾದುಲ್‌ ಮುಸ್ಲಿಮೀನ್‌ (ಎಐಎಂಐಎಂ) ಪಕ್ಷದ ಜತೆಗೆ ಕಾಂಗ್ರೆಸ್‌ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ರಾಜ್ಯಸಭಾ ವಿಪಕ್ಷ ನಾಯಕರಾದ ಕಾಂಗ್ರೆಸ್‌ನ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ.

ಇದೇ ವೇಳೆ ಅವರು, ಎಐಎಂಐಎಂ ಪಕ್ಷವು ಬಿಜೆಪಿಯ “ಬಿ’ ಟೀಂ ಆಗಿದ್ದು, ಜಾತ್ಯತೀತ ಧೋರಣೆಗಳನ್ನು ಹೊಂದಿರುವ ಪಕ್ಷಗಳನ್ನು ಮಣಿಸಲೆಂದೇ ಇರುವ ಇಂಥ “ಬಿ’ ಟೀಂ ಪಕ್ಷಗಳ ಬಗ್ಗೆ ಕಾಂಗ್ರೆಸ್‌ ಎಚ್ಚರಿಕೆಯಿಂದಿರಬೇಕು ಎಂದು ತಿಳಿಸಿದ್ದಾರೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next