Advertisement

ಸಚಿವ ಪ್ರಸಾದ್‌ಗೆ ತರೂರ್‌ ನೋಟಿಸ್‌

08:05 AM Nov 01, 2018 | Team Udayavani |

ಹೊಸದಿಲ್ಲಿ: ಕೇಂದ್ರ ಸಚಿವ ರವಿಶಂಕರ ಪ್ರಸಾದ್‌ ತಮ್ಮನ್ನು ಕೊಲೆಗಡುಕ ಎಂದು ಕರೆದಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್‌ ನಾಯಕ ಶಶಿ ತರೂರ್‌ ವಕೀಲರ ನೋಟಿಸ್‌ ಕಳುಹಿಸಿದ್ದಾರೆ. ಮುಂದಿನ 48 ಗಂಟೆಗಳಲ್ಲಿ ಕ್ಷಮೆಯಾಚಿಸಬೇಕು. ಇಲ್ಲದೇ ಇದ್ದರೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ. ರವಿವಾರ ಸಚಿವ ಪ್ರಸಾದ್‌ ತರೂರ್‌ ತಮ್ಮ ಪತ್ನಿ ಸುನಂದಾ ಪುಷ್ಕರ್‌ರ ಕೊಲೆ ಮೊಕದ್ದಮೆಯಲ್ಲಿ ಆರೋಪಿ. ಅವರು ಶಿವಲಿಂಗವನ್ನು ಅವಮಾನಿಸಿದ್ದಾರೆ. ಅವರ ಪರವಾಗಿ ರಾಹುಲ್‌ ಗಾಂಧಿ ಕ್ಷಮೆ ಕೇಳಬೇಕೆಂದು ಹೇಳಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next