Advertisement

Kannada Cinema; ತೆರೆಗೆ ಬಂತು ನವತಂಡದ ‘ಶತಭಿಷ ‘

10:31 AM Jun 28, 2024 | Team Udayavani |

ಹೊಸಬರ ಶತಭಿಷ ಚಿತ್ರ ಇಂದು ತೆರೆಕಾಣುತ್ತಿದೆ. ವೆಂಕಟೇಶ್‌ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ “ಶತಭಿಷ’ ಚಿತ್ರವನ್ನು ಕಾಶಿ ಶೇಖರ್‌ ನಿರ್ಮಾಣ ಮಾಡಿದ್ದಾರೆ. ದೀಪು ಅರ್ಜುನ್‌ ಈ ಚಿತ್ರದ ನಾಯಕನಾಗಿದ್ದು, ಶೋಭಿತಾ ಶಿವಣ್ಣ ನಾಯಕಿಯಾಗಿ ನಟಿಸಿದ್ದಾರೆ.

Advertisement

“ನಾಲ್ವರು ಪೋಲಿ ಹುಡುಗರು ಭಯೋತ್ಪಾದಕರಿಗೆ ಬೆಂಬಲ ನೀಡಲು ಹೋಗಿ ಪೊಲೀಸ್‌ ಕೈಗೆ ಸಿಕ್ಕಿ ಹಾಕಿಕೊಳ್ಳುತ್ತಾರೆ. ನಂತರ ಅವರು ಆ ಕೇಸ್‌ನಿಂದ ಹೊರಗೆ ಬರುತ್ತಾರಾ? ಈ ಕೇಸ್‌ ನಲ್ಲಿ ಅವರು ಸಿಲುಕುವುದಾದರೂ ಹೇಗೆ ಎನ್ನುವುದೇ ಚಿತ್ರದ ಕಾನ್ಸೆಪ್ಟ್’ ಎನ್ನುವುದು ತಂಡ ನೀಡುವ ವಿವರ.

ಚಿತ್ರದ ಕುರಿತಂತೆ ಮಾತನಾಡಿದ ನಾಯಕ ದೀಪು ಅರ್ಜುನ್‌, “ಈಗಿನ ಟ್ರೆಂಡ್‌ ಗೆ ಬೇಕಾದ ಕಥೆಯಿದು. ವಿರಾಜಪೇಟೆ, ಮೇಲುಕೋಟೆ, ಹುಬ್ಬಳ್ಳಿ, ಮುಂಬೈ, ಬೆಂಗಳೂರು, ಚಿಂತಾಮಣಿ ಅಲ್ಲದೆ ಚೆನ್ನೈ ಸೇರಿದಂತೆ ಸಾಕಷ್ಟು ಲೊಕೇಶನ್‌ಗಳಲ್ಲಿ ಚಿತ್ರೀಕರಣ ನಡೆಸಿದ್ದೇವೆ. ಚಿತ್ರದಲ್ಲಿ ತುಂಟಾಟ ಮಾಡಿಕೊಂಡಿದ್ದ ಹುಡುಗ ಹೇಗೆ ನಕ್ಸಲ್‌ ಆಗ್ತಾನೆ, ಎಲ್ಲಿಂದಲೋ ಬಂದ ನಕ್ಸಲರು ಒಬ್ಬ ಹುಡುಗನನ್ನು ಹೇಗೆಲ್ಲಾ ಹಾಳು ಮಾಡ್ತಾರೆ, ಆತನಿಗೆ ನಾಯಕಿಯ ಪರಿಚಯ ನಂತರ ಪ್ರೀತಿಯಾಗಿ ಮುಂದೇನಾಗುತ್ತೆ ಎಂಬುದನ್ನು ಸಿನಿಮಾದಲ್ಲೇ ನೋಡಬೇಕು’ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next