Advertisement

Mangaluru: NITK ಟೋಲ್ ಗೇಟ್ ಬಳಿ ಕುರಿಗಳ ಮೃತದೇಹ ಪತ್ತೆ ಪ್ರಕರಣ: ಎಫ್ ಐಆರ್ ದಾಖಲು

09:24 AM Aug 05, 2024 | Team Udayavani |

ಮಂಗಳೂರು: ಸುರತ್ಕಲ್ ಹಳೆ ಟೋಲ್ ಗೇಟ್ ಬಳಿ ಸತ್ತ ಕುರಿಗಳನ್ನು ಎಸೆದು ಹೋಗಿರುವ ಘಟನೆಗೆ ಸಂಬಂಧಿಸಿ ಕಾವೂರು ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ.

Advertisement

ಸುಮಾರು 15 ಸತ್ತ ಕುರಿಗಳನ್ನು ಯಾರೋ ಸುರತ್ಕಲ್ NITK ಹಳೆ ಟೋಲ್ ಗೇಟ್ ಬಳಿ ಎಸೆದು ಹೋಗಿದ್ದು, ನಿನ್ನೆ (ಆಗಸ್ಟ್ ೪) ಬೆಳಗ್ಗೆ ಸ್ಥಳೀಯರು 2ನೇ ವಾರ್ಡ್ ನ ಕಾರ್ಪೋರೇಟರ್ ಶ್ವೇತಾ ಪೂಜಾರಿ ಇವರಿಗೆ ಮಾಹಿತಿ ನೀಡಿದ ಮೇರೆಗೆ ಅವರು ಮಹಾನಗರಪಾಲಿಕೆಯ ಅಧಿಕಾರಿ ಹಾಗೂ ಸಿಬ್ಬಂದಿ ರೊಂದಿಗೆ ಸ್ಥಳಕ್ಕೆ ಹೋಗಿ ಸತ್ತ ಕುರಿಗಳ ಮೃತ ದೇಹಗಳನ್ನು ಸುರಕ್ಷಿತ ಸ್ಥಳದಲ್ಲಿ ಧಫನ ಮಾಡಿಸಿದ್ದಾರೆ.

ಉತ್ತರ ಕರ್ನಾಟಕ ಕಡೆಯಿಂದ ಕುರಿಸಾಗಾಟ ವಾಹನಗಳಲ್ಲಿ ಮಂಗಳೂರಿಗೆ ಕುರಿ ಮಾರಾಟ ಮಾಡುವ ವ್ಯಾಪಾರಿಗಳು ಸಾಗಾಟದ ವೇಳೆ ಮೃತ ಪಟ್ಟ ಕುರಿಗಳನ್ನು ವಾಪಾಸು ಹೋಗುವ ವೇಳೆಗೆ ರಸ್ತೆ ಪಕ್ಕದಲ್ಲಿ ಪೊದೆಗಳಲ್ಲಿ ಎಸೆದು ಹೋಗಿರಬಹುದು ಎಂದು ಪ್ರಾಥಮಿಕ ವಿಚಾರಣೆಯಿಂದ ತಿಳಿದು ಬಂದಿದೆ. ಅಂತಹ ವ್ಯಕ್ತಿಗಳ ಪತ್ತೆಗೆ ಕ್ರಮ ವಹಿಸಲಾಗಿದ್ದು. ಕಾವೂರು ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಬಿಹಾರದಲ್ಲಿ ಘೋರ ದುರಂತ: ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ 8 ಭಕ್ತರ ದುರಂತ ಅಂತ್ಯ

Advertisement

Udayavani is now on Telegram. Click here to join our channel and stay updated with the latest news.

Next