Advertisement

ರಾಯಚೂರು : ಕೃಷ್ಣೆಗೆ ಹೆಚ್ಚಿದ ಹರಿವು : ಶೀಲಹಳ್ಳಿ ಸೇತುವೆ ಮುಳುಗಡೆ

12:56 PM Jul 23, 2021 | Team Udayavani |

ರಾಯಚೂರು : ಜಲಾನಯನ ಪ್ರದೇಶದಲ್ಲಿ ಹೆಚ್ಚಿದ ಮಳೆಯಿಂದ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 2.50 ಲಕ್ಷ ಕ್ಯೂಸೆಕ್ ನೀರು ಹರಿಬಿಡಲಾಗಿದೆ. ಇದರಿಂದ ಲಿಂಗಸೂಗೂರು ತಾಲೂಕು ವ್ಯಾಪ್ತಿಯ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿದೆ.

Advertisement

ಇದರಿಂದ ಕಡದರಗಡ್ಡಿ, ಯಳಗುಂದಿ, ಹಂಚಿನಾಳ ಸೇರಿದಂತೆ ವಿವಿಧ ನಡುಗಡ್ಡೆ ಪ್ರದೇಶಗಳಿಗೆ ಸಂಪರ್ಕ ಕಡಿತಗೊಂಡಿದೆ. ಬೆಳಗ್ಗೆ  1.90  ಕ್ಯೂಸೆಕ್ ನೀರು ಹರಿಸಲಾಗಿತ್ತು. ಒಳಹರಿವು ಹೆಚ್ಚಾಗುತ್ತಿದ್ದಂತೆ ಜಲಾಶಯದಿಂದ ಹೊರಹರಿವು ಹೆಚ್ಚಾಗಿದೆ.

ಸಂಜೆ ವೇಳೆಗೆ ಈ ನೀರಿನ ಪ್ರಮಾಣ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಇನ್ನೂ ನದಿಪಾತ್ರದ ಹಳ್ಳಿಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ವಿಪತ್ತು ನಿರ್ವಹಣಾ ಸಮಿತಿಗೆ ಎಸಿ ತಿಳಿಸಿದ್ದಾರೆ.  ನದಿಗೆ ಇಳಿಯದಂತೆ ಗ್ರಾಮಗಳಲ್ಲಿ ಡಂಗೂರ ಸಾರಿ ಹೇಳಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next