Advertisement

Surathkal ಸೂರಿಕುಮೇರು ಗೋವಿಂದ ಭಟ್‌ ಅವರಿಗೆ ಶೇಣಿ ಪ್ರಶಸ್ತಿ

11:12 PM Oct 29, 2023 | Team Udayavani |

ಸುರತ್ಕಲ್‌: ಶೇಣಿ ಗೋಪಾಲಕೃಷ್ಣ ಭಟ್‌ ಚಾರಿಟೆಬಲ್‌ ಟ್ರಸ್ಟ್‌ ವತಿಯಿಂದ ಶೇಣಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ರವಿವಾರ ಸುರತ್ಕಲ್‌ ಗೋವಿಂದದಾಸ ಕಾಲೇ ಜಿನ ಸಭಾಂಗಣದಲ್ಲಿ ಜರಗಿತು.

Advertisement

ಯಕ್ಷಗಾನದ ಹಿರಿಯ ಕಲಾವಿದ ಕೆ.ಗೋವಿಂದ ಭಟ್‌ ಸೂರಿಕುಮೇರು ಇವರಿಗೆ ಶೇಣಿ ಪ್ರಶಸ್ತಿ ಪ್ರದಾನಿಸಲಾಯಿತು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ಜೀವನ ನಿರ್ವಹಣೆಗಾಗಿ ಯಕ್ಷಗಾನ ಆಯ್ಕೆಮಾಡಿಕೊಂಡೆ. ಕಲಾವಿದರು ಗುರುತಿಸಿ ಇಷ್ಟು ಎತ್ತರಕ್ಕೆ ಬೆಳೆಸಿದರು. ಇಂದು ಶೇಣಿ ಪ್ರಶಸ್ತಿಯ ಗೌರವ ಒಲಿದಿರುವುದು ಸಂತೋಷ ತಂದಿದೆ ಎಂದರು.

ಟ್ರಸ್ಟ್‌ನ ಗೌರವಾಧ್ಯಕ್ಷ ಹರಿಕೃಷ್ಣ ಪುನರೂರು ಅವರು ಅಭಿನಂದಿಸಿ, ಗೋವಿಂದ ಭಟ್‌ ಅವರಿಗೆ ಪ್ರಶಸ್ತಿ ನೀಡಿರುವುದು ಸ್ತುತ್ಯಾರ್ಹ ಎಂದರು. ವೇ| ಮೂ| ವಾದಿರಾಜ ಉಪಾಧ್ಯಾಯ ಕೊಲೆಕಾಡಿ, ವಿದುಷಿ ಸುಮಂಗಲಾ ರತ್ನಾಕರ ರಾವ್‌ ಮಾತನಾಡಿದರು. ಯುಗಪುರುಷದ ಭುವನಾಭಿರಾಮ ಉಡುಪ, ಬ್ಯಾಂಕ್‌ ಆಫ್‌ ಬರೋಡಾದ ಐ. ಎಂ. ಆರ್‌. ಗಾಯತ್ರಿ, ಎಸ್‌ಬಿಐ ಬ್ಯಾಂಕ್‌ ಪ್ರಾದೇಶಿಕ ವ್ಯವಸ್ಥಾಪಕ ಉದಯಕುಮಾರ್‌ ಬಿ.ವಿ., ಗೋವಿಂದದಾಸ ಕಾಲೇಜಿನ ಪ್ರಾಂಶುಪಾಲ ಪ್ರೊ| ಕೃಷ್ಣಮೂರ್ತಿ, ಉದ್ಯಮಿ ದಿವಾಣ ಗೋವಿಂದ ಭಟ್‌, ಎಂಆರ್‌ಪಿಎಲ್‌ನ ಅಧಿಕಾರಿ ಮಾಲತೇಶ್‌, ಟ್ರಸ್ಟ್‌ನ ಉಪಾಧ್ಯಕ್ಷ ಕೊಡ್ಲು ಮಹಾಬಲ ಶೆಟ್ಟಿ ಉಪಸ್ಥಿತರಿದ್ದರು.

ಕಾರ್ಯದರ್ಶಿ ಪಿ.ವಿ. ರಾವ್‌ ಸ್ವಾಗತಿಸಿದರು. ಕೋಶಾಧಿಕಾರಿ ಜೆ.ಕೆ. ಭಟ್‌ ಸೇರಾಜೆ ನಿರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next