Advertisement

Karnataka: ಮೇಲ್ಮನೆಗೆ ಶೆಟ್ಟರ್‌, ಬೋಸರಾಜ್‌, ತಿಪ್ಪಣ್ಣಪ್ಪ ಅವಿರೋಧ ಆಯ್ಕೆ

08:58 PM Jun 23, 2023 | Team Udayavani |

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ತಿನ ಖಾಲಿ ಇರುವ ಮೂರು ಸ್ಥಾನಗಳಿಗೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಸೇರಿ ಮೂವರು ಅವಿರೋಧ ಆಯ್ಕೆಯಾಗಿದ್ದಾರೆ.

Advertisement

ಕಾಂಗ್ರೆಸ್‌ನಿಂದ ಜಗದೀಶ ಶೆಟ್ಟರ್‌, ಸಚಿವ ಎನ್‌.ಎಸ್‌. ಬೋಸರಾಜು, ತಿಪ್ಪಣ್ಣಪ್ಪ ಕಮಕನೂರು ನಾಮಪತ್ರ ಸಲ್ಲಿಸಿದ್ದರು. ಶುಕ್ರವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿತ್ತು. ಈ ಮಧ್ಯೆ ಬೇರೆ ನಾಮಪತ್ರಗಳೂ ಸಲ್ಲಿಕೆಯಾಗಿರಲಿಲ್ಲ. ಹಾಗಾಗಿ, ಮೂವರನ್ನೂ ಮೇಲ್ಮನೆ ಸದಸ್ಯರನ್ನಾಗಿ ಚುನಾವಣಾಧಿಕಾರಿಯೂ ಆದ ವಿಧಾನಸಭಾ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅಧಿಕೃತವಾಗಿ ಘೋಷಿಸಿದರು.

ಇನ್ನು ಇದೇ ಸ್ಥಾನಗಳಿಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಡಾ.ಕೆ. ಪದ್ಮರಾಜನ್‌ ಅವರ ನಾಮಪತ್ರ ಸೂಚಕರಿಲ್ಲದ ಕಾರಣ ತಿರಸ್ಕೃತಗೊಂಡಿದ್ದವು. ಜೂನ್‌ 30ರಂದು ಮತದಾನ ನಿಗದಿಯಾಗಿತ್ತು. ಬೇರೆ ನಾಮಪತ್ರಗಳು ಸಲ್ಲಿಕೆಯಾಗದ ಕಾರಣ ಚುನಾವಣೆ ಪ್ರಕ್ರಿಯೆ ಶುಕ್ರವಾರವೇ ಅಂತ್ಯಗೊಂಡಿತು.

 

Advertisement

Udayavani is now on Telegram. Click here to join our channel and stay updated with the latest news.

Next