Advertisement

ಸಾರ್ವಜನಿಕರ ಅಹವಾಲು ಆಲಿಸಿದ ಶೆಟ್ಟರ

05:45 PM Jan 21, 2022 | Team Udayavani |

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರು ಗುರುವಾರ ಇಲ್ಲಿನ ಹಳೇಹುಬ್ಬಳ್ಳಿಯ ಅರವಿಂದ ಹಾಗೂ ಬ್ಯಾಂಕರ್ಸ್‌ ಕಾಲೋನಿಯಲ್ಲಿ ನಡೆಯುತ್ತಿರುವ ರಸ್ತೆ ಹಾಗೂ ಒಳಚರಂಡಿ ಕಾಮಗಾರಿಗಳನ್ನು ವೀಕ್ಷಿಸಿದರು. ಇದೇ ಸಂದರ್ಭದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದರು.

Advertisement

ವಾರ್ಡ್‌ ನಂ. 42ರ ಅರವಿಂದ ನಗರದ ರಸ್ತೆ ಹಾಗೂ ಒಳಚರಂಡಿ ಸಮಸ್ಯೆ ವೀಕ್ಷಿಸಿ ಮಾತನಾಡಿದ ಅವರು, ಇಲ್ಲಿನ ರಸ್ತೆ-ಒಳಚರಂಡಿ ಅಭಿವೃದ್ಧಿ ಪಡಿಸಲಾಗುವುದು. ಉದ್ಯಾನದ ಸಮಸ್ಯೆ ಬಗೆಹರಿಸಲಾಗುವುದು. ಸಾರ್ವಜನಿಕರು ಓಡಾಡಲು ಫುಟ್‌ಪಾತ್‌ ನಿರ್ಮಿಸಲಾಗುವುದು.

ಚನ್ನಪೇಟೆಯ ಚರಂಡಿ ಮಣ್ಣಿನಿಂದ ತುಂಬಿ ಹೋಗಿದೆ. ಈ ಚರಂಡಿಯಿಂದ ಇಲ್ಲಿನ ಜನರು ಬಹಳ ತೊಂದರೆ ಅನುಭವಿಸುತ್ತಿದ್ದಾರೆ. ಆದಷ್ಟು ಬೇಗ ಚರಂಡಿಯಲ್ಲಿನ ಹೂಳು ತೆಗೆಯಲು ಅಧಿಕಾರಿಗಳಿಗೆ ಸೂಚಿಸುವೆ. ಜಲಮಂಡಳಿ ಹಾಗೂ ಪಾಲಿಕೆ ಸದಸ್ಯರ ಜತೆ ಮಾತನಾಡಿ ವಾರ್ಡ್‌ನ ಒಳರಸ್ತೆಗಳನ್ನು ಅಭಿವೃದ್ಧಿ ಮಾಡಲಾಗುವುದು. ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಚರಂಡಿ ದುರಸ್ತಿ ಮಾಡಲಾಗುವುದು ಎಂದರು.

ವಾರ್ಡ್‌ ನಂ. 40ರ ಬ್ಯಾಂಕರ್ಸ್‌ ಕಾಲೋನಿಗೆ ಭೇಟಿ ನೀಡಿದ ಅವರು, ನಗರೋತ್ಥಾನ ಯೋಜನೆಯಡಿ ನಡೆಯುತ್ತಿರುವ ರಸ್ತೆ ಕಾಮಗಾರಿ ವೀಕ್ಷಿಸಿದರು. ಕಳಪೆ ಕಾಮಗಾರಿ ಕಂಡು ಬಂದರೆ ಕೂಡಲೇ ಅಧಿಕಾರಿಗಳ ಗಮನಕ್ಕೆ ತರಬೇಕು. ಅಭಿವೃದ್ಧಿ ಕೆಲಸಗಳಿಗೆ ಯಾವುದೇ ರೀತಿ ಅಡೆತಡೆ ಆಗದಂತೆ ಜನರು ಸಹಕರಿಸಬೇಕು. ರಸ್ತೆ ಅಗಲೀಕರಣದಿಂದ ಜನರಿಗೆ ಕೆಲವು ದಿನಗಳ ಕಾಲ ತೊಂದರೆ ಆಗಲಿದೆ. ಆದ್ದರಿಂದ ಶೀಘ್ರ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ವಾರ್ಡ್‌ ಜನರ ಕುಂದುಕೊರತೆ ಆಲಿಸಿ, ಸಮಸ್ಯೆಗಳಿಗೆ ಕೂಡಲೇ ಪರಿಹಾರ ಒದಗಿಸಲಾಗುವುದು ಎಂದು ಭರವಸೆ ನೀಡಿದರು. ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಮಾಜಿ ಮಹಾಪೌರ ಡಿ.ಕೆ.ಚವ್ಹಾಣ, ಪಾಲಿಕೆ ಸದಸ್ಯ ಸಂತೋಷ ಚವ್ಹಾಣ, ಮುಖಂಡರಾದ ವಿನಾಯಕ ಕುಲಕರ್ಣಿ, ಮಹೇಂದ್ರ ಕೌತಾಳ, ಮುಕುಂದ ಗುಗ್ಗರಿ, ಶಿವನಗೌಡ ಮೊದಲಾವರಿದ್ದರು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next