Advertisement

ಅಧಿಕಾರ ಕಳಕೊಂಡವರಿಂದ ಚುನಾವಣೆ ಜಪ: ಶೆಟ್ಟರ್‌

11:17 PM Aug 29, 2019 | Lakshmi GovindaRaj |

ಹುಬ್ಬಳ್ಳಿ: ಅಧಿಕಾರ ಕಳೆದುಕೊಂಡವರು ಮಧ್ಯಂತರ ಚುನಾವಣೆ ಎದುರಾಗುತ್ತಿದೆ ಎನ್ನುತ್ತಿದ್ದಾರೆ ಎಂದು ಡಿಕೆಶಿ ಹೇಳಿಕೆಗೆ ಸಚಿವ ಜಗದೀಶ ಶೆಟ್ಟರ್‌ ತಿರುಗೇಟು ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಅಧಿಕಾರದಲ್ಲಿದ್ದಾಗ ಯಾವುದೇ ಕಾರಣಕ್ಕೂ ಮಧ್ಯಂತರ ಚುನಾವಣೆ ಆಗುವುದಿಲ್ಲ. ಸರ್ಕಾರ ಸುಭದ್ರವಾಗಿದೆ ಎಂದು ಹೇಳುತ್ತಿದ್ದರು. ಆದರೆ ಇದೀಗ ಅಧಿಕಾರ ಕಳೆದುಕೊಂಡಿದ್ದಾರೆ. ಹೀಗಾಗಿ ಮಧ್ಯಂತರ ಚುನಾವಣೆ ನೆನಪಾಗುತ್ತಿದೆ.

Advertisement

ಯಾವುದೇ ಕಾರಣಕ್ಕೂ ಮಧ್ಯಂತರ ಚುನಾವಣೆ ನಡೆಯುವುದಿಲ್ಲ. ನಾಲ್ಕು ವರ್ಷಗಳ ಕಾಲ ಸುಭದ್ರ ಆಡಳಿತ ನೀಡಲಿದ್ದೇವೆ ಎಂದರು. ನೆರೆ ಪರಿಹಾರ ಕಾರ್ಯಗಳಿಗೆ ಹಣದ ತೊಂದರೆಯಾಗಿಲ್ಲ. ಪರಿಹಾರ ನೀಡುವ ಕೆಲಸ ನಡೆಯುತ್ತಿದೆ. ಕೇಂದ್ರದಿಂದ ತಂಡ ಬಂದು ಹೋಗಿದೆ. ಸಮರ್ಪಕ ಅನುದಾನ ರಾಜ್ಯಕ್ಕೆ ದೊರೆಯುತ್ತಿದೆ. ಕೇಂದ್ರ ಗೃಹ ಇಲಾಖೆ ಹಾಗೂ ಅಧಿಕಾರಗಳ ನೇತೃತ್ವದಲ್ಲೇ ನೆರೆ ಕುರಿತು ನಿರ್ಧಾರವಾಗಲಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next